ಕಾಶ್ಮೀರ ಸುರಂಗ ಕುಸಿತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಶ್ರೀನಗರ್, ಮೇ 21: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ರಾಮಬನ್ನಲ್ಲಿ ನಿರ್ಮಿಸಲಾಗುತ್ತಿದ್ದ ಸುರಂಗವೊಂದು ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ. ಸುರಂಗದ ಅವಶೇಷಗಳ ಅಡಿ ಇನ್ನೂ ಒಂದಿಬ್ಬರು ಮಂದಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ, ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.
ನಿನ್ನೆ ಶುಕ್ರವಾರ ಈ ಜಾಗದಲ್ಲಿ ಭೂಕುಸಿತವಾದ್ದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ಶನಿವಾರ ಕಾರ್ಯಾಚರಣೆ ಪುನಾರಂಭಗೊಂಡಿತು.
"ಭೂಕುಸಿತ ಪ್ರದೇಶದಲ್ಲಿ ಅವಶೇಷ ತೆರವು ಕಾರ್ಯಾಚರಣೆ ಪುನಾರಂಭಿಸಿದ್ದೇವೆ. ಆದಷ್ಟೂ ಬೇಗ ಕಾರ್ಯ ಮುಗಿಸಲು ಯಂತ್ರೋಪಕರಣ ಮತ್ತು ತಾಂತ್ರಿಕ ಪರಿಣತಿಯ ಜನರ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ" ಎಂದು ತಹಶೀಲ್ದಾರ್ ಜಾವೇದ್ ಹೇಳಿದ್ದಾರೆ.
ನಿನ್ನೆ ಘಟನಾ ಸ್ಥಳದಲ್ಲಿ ಒಂದು ಮೃತದೇಹ ಸಿಕ್ಕಿತ್ತು. ಅವಶೇಷಗಳ ಅಡಿಯಲ್ಲಿ ಇಂದು ಶನಿವಾರ ಎಂಟು ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿದೆ.

"ದೊಡ್ಡ ಬಂಡೆಯ ಅಡಿಯಲ್ಲಿ ಮತ್ತೊಂದು ದೇಹ ಕಾಣಿಸಿದೆ. ಯಂತ್ರಗಳ ಮೂಲಕ ಈ ಬಂಡೆಯನ್ನು ತೆಗೆದು ದೇಹ ಹೊರತೆಗೆಯುವ ಪ್ರಯತ್ನ ಆಗುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಕೊನೆಯ ಹಂತಕ್ಕೆ ಬಂದಿದ್ದೇವೆ," ಎಂದು ರಾಮಬನ್ ಎಸ್ಎಸ್ಪಿ ಮೋಹಿತಾ ಶರ್ಮಾ ಹೇಳಿಕೆ ನೀಡಿದ್ದರು. ಅದಾದ ಬಳಿಕ ಇನ್ನೂ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸಾವನ್ನಪ್ಪಿದವರಲ್ಲಿ ಐವರು ಬಂಗಾಳ ರಾಜ್ಯದವರಾದರೆ, ನೇಪಾಳದ ಇಬ್ಬರು ಮತ್ತು ಅಸ್ಸಾಮ್ನ ಒಬ್ಬ ವ್ಯಕ್ತಿ ಇದ್ದಾರೆ. ಇನ್ನಿಬ್ಬರು ಸ್ಥಳೀಯರಾಗಿದ್ದಾರೆ. ಕಾಮಗಾರಿಯಲ್ಲಿ ನಿರ್ಲಕ್ಷ್ಯತನ ತೋರಲಾಗಿದೆ ಎಂದು ಆರೋಪಿಸಿ ಎಫ್ಐಆರ್ ದಾಖಲಲಿಲಾಗಿದೆ ಎಂದು ಮೋಹಿತಾ ಶರ್ಮಾ ಮಾಹಿತಿ ನೀಡಿದ್ದಾರೆ.

ಎನಿದು ಸುರಂಗ?
ರಾಮಬನ್ ಜಿಲ್ಲೆಯಲ್ಲಿರುವ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಪಥದ ರಸ್ತೆಯಿರುವ ಸುರಂಗವನ್ನು ನಿರ್ಮಿಸಲಾಗುತ್ತಿದೆ. ಅದರ ಒಂದು ಭಾಗವು ಗುರುವಾರ ರಾತ್ರಿ ಕುಸಿದುಹೋಗಿತ್ತು. ಈ ಘಟನೆಯಲ್ಲಿ ನಿನ್ನೆ ಶುಕ್ರವಾರ ಮೂವರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
(ಒನ್ಇಂಡಿಯಾ ಸುದ್ದಿ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications