ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಿಹಾರ ಕಾರ್ಮಿಕರ ಹತ್ಯೆಯ ಹೊಣೆ ಹೊತ್ತ ಲಷ್ಕರ್!
ಶ್ರೀನಗರ, ಅಕ್ಟೋಬರ್ 18: ಜಮ್ಮು ಕಾಶ್ಮೀರದಲ್ಲಿ ನಾಗರಿಕನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಭಾನುವಾರವಷ್ಟೇ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ನಡೆಸಿದ ದಾಳಿ ಹೊಣೆಯನ್ನು ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ಯುನೈಟೆಡ್ ಲಿಬರೇಷನ್ ಫ್ರೆಂಟ್ ಹೊತ್ತುಕೊಂಡಿವೆ.
ಕಣಿವೆ ರಾಜ್ಯವನ್ನು ತೊರೆಯುವಂತೆ ವಲಸೆ ಕಾರ್ಮಿಕರಿಗೆ ಭಯೋತ್ಪಾದಕ ಸಂಘಟನೆಗಳು ಭಯ ಹುಟ್ಟಿಸುತ್ತಿವೆ. ಈ ನಿಟ್ಟಿನಲ್ಲೇ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಮೇಲಿಂದ ಮೇಲೆ ದಾಳಿ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಮೂರು ಕಡೆ ಉಗ್ರರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ.
ಭಾನುವಾರ ಬಿಹಾರ ಮೂಲದ ಇಬ್ಬರು ಕಾರ್ಮಿಕರನ್ನು ಹೊಡೆದುರುಳಿಸಿದ ಉಗ್ರರು, ದಕ್ಷಿಣ ಕಾಶ್ಮೀರದ ಕುಲ್ಗಾಮ್ ನಲ್ಲಿರುವ ವಸತಿಗೃಹಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲೇ ಉಗ್ರರು ನಡೆಸಿದ ದಾಳಿಗೆ 11 ಮಂದಿ ವಲಸೆ ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ.

ಕಾಶ್ಮೀರ ತೊರೆಯುತ್ತಿರುವ ವಲಸೆ ಕಾರ್ಮಿಕರು, ಪಂಡಿತರು:
ಕಾಶ್ಮೀರದಲ್ಲಿ ಗುರಿಯಾಗಿಸಿಕೊಂಡು ನಡೆಯುತ್ತಿರುವ ನಾಗರಿಕ ಹತ್ಯೆಗಳಿಂದ ಒಂದು ವಾರದ ಹಿಂದೆ ಕಳೆದ ಹಲವು ಶಿಬಿರಗಳಲ್ಲಿ ವಾಸಿಸುತ್ತಿದ್ದ ಹಲವಾರು ಕಾಶ್ಮೀರಿ ಪಂಡಿತರು ರಾಜ್ಯ ತೊರೆಯುವುದಕ್ಕೆ ಪ್ರಮುಖ ಕಾರಣವಾಯಿತು. ಹತ್ತಾರು ಕುಟುಂಬಗಳು - ಕಾಶ್ಮೀರಿ ವಲಸಿಗರಿಗೆ ಪ್ರಧಾನ ಮಂತ್ರಿಗಳ ವಿಶೇಷ ಉದ್ಯೋಗ ಯೋಜನೆಯಡಿ ಕೆಲಸ ನೀಡಿದ ನಂತರ ಕಣಿವೆಗೆ ಮರಳಿದ ಅನೇಕ ಸರ್ಕಾರಿ ಉದ್ಯೋಗಿಗಳು ಸದ್ದಿಲ್ಲದೆ ಜಮ್ಮು ಕಾಶ್ಮೀರವನ್ನು ತೊರೆಯುತ್ತಿದ್ದಾರೆ.
ಕಣಿವೆ ರಾಜ್ಯದಲ್ಲಿ ಭಯ ಹುಟ್ಟಿಸುವ ಹುನ್ನಾರ:
ಜಮ್ಮು ಕಾಶ್ಮೀರದಲ್ಲಿ ಭಯದ ವಾತಾವರಣ ಸೃಷ್ಟಿಸುವುದರ ಹಿಂದೆ ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್ಐ) ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಸೆಪ್ಟೆಂಬರ್ 13ರಂದು ಉಗ್ರರು, ಸೇನೆ ಹಾಗೂ ಭಯೋತ್ಪಾದಕರೊಂದಿಗೆ ಸಭೆ ನಡೆಸಿದ ಐಎಸ್ಐ ಕಣಿವೆ ರಾಜ್ಯದಲ್ಲಿ ಶಾಂತಿ ಕದಡುವ ಬಗ್ಗೆ ಚರ್ಚೆ ನಡೆಸಿದೆ. ರಾಜ್ಯದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಐಎಸ್ಐ 200 ಜನರ "ಹಿಟ್-ಲಿಸ್ಟ್" ಮಾಡಿದೆ. ಭಾರತೀಯ ಸರ್ಕಾರಕ್ಕೆ ಹತ್ತಿರವಿರುವ ಮಾಧ್ಯಮ ಸಿಬ್ಬಂದಿ ಮತ್ತು ಭಾರತೀಯ ಏಜೆನ್ಸಿಗಳು ಮತ್ತು ಭದ್ರತಾ ಪಡೆಗಳ ಮೂಲಗಳು ಮತ್ತು ಮಾಹಿತಿದಾರರನ್ನು ಹೊರತುಪಡಿಸಿ, ವಲಸೆ ಕಾರ್ಮಿಕರು, ಪಂಡಿತರು ಹಾಗೂ ಕಾಶ್ಮೀರಕ್ಕೆ ಅವರನ್ನು ಹಿಂದಿರುಗಿಸಲು ಸಕ್ರಿಯವಾಗಿ ಶ್ರಮಿಸುತ್ತಿರುವ ಅನೇಕ ಕಾಶ್ಮೀರಿ ಪಂಡಿತರ ಹೆಸರನ್ನು ಸೇರಿಸಲಾಗಿದೆ.
ವಲಸೆ ಕಾರ್ಮಿಕರ ಸುರಕ್ಷತೆಗೆ ಶಿಸ್ತುಕ್ರಮ:
ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ (ಕಾಶ್ಮೀರ) ವಿಜಯ್ ಕುಮಾರ್ ತಿಳಿಸಿದ್ದಾರೆ. "ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ವಲಸೆ ಕಾರ್ಮಿಕರನ್ನು ಈಗಲೇ ಹತ್ತಿರದ ಪೊಲೀಸ್ ಅಥವಾ ಕೇಂದ್ರ ಅರೆಸೇನಾ ಪಡೆ ಅಥವಾ ಸೇನಾ ಕೇಂದ್ರಗಳಿಗೆ ಸ್ಥಾಪನೆಗೆ ಕರೆತರಬೇಕು," ಎಂದು ಸೂಚನೆ ನೀಡಿದ್ದಾರೆ.
ಕಾಶ್ಮೀರ ಗವರ್ನರ್ ಜೊತೆ ಬಿಹಾರ ಸಿಎಂ ಚರ್ಚೆ:
ಶನಿವಾರ ರಾತ್ರಿ ವೇಳೆಗೆ "ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಅರವಿಂದ್ ಕುಮಾರ್ ಎಂಬ ಸ್ಥಳೀಯೇತರ ಮಾರಾಟಗಾರನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಕಾಶ್ಮೀರ ವಿಜಯ್ ಕುಮಾರ್ ಹೇಳಿದ್ದರು. ಅರವಿಂದ್ ಕುಮಾರ್ ಹತ್ಯೆಯಾದ ಮರುದಿನವೇ ಅನಂತನಾಗ್ನಲ್ಲಿ ರಾಜಾ ರಿಷಿದೇವ್ ಮತ್ತು ಯೋಗೇಂದ್ರ ರಿಷಿದೇವ್ ಕೊಲೆಯಾದ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ದೂರವಾಣಿ ಮೂಲಕ ಮಾತನಾಡಿದ್ದಾರೆ. ಭಯೋತ್ಪಾದಕ ದಾಳಿಯಲ್ಲಿ ಪೂರ್ವ ರಾಜ್ಯದ ಜನರು ಹತ್ಯೆ ಆಗುತ್ತಿರುವ ಬಗ್ಗೆ ನಿತೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications