ಜಮ್ಮು-ಕಾಶ್ಮೀರದಲ್ಲಿ ಉಗ್ರನ ಅಂತ್ಯ ಸಂಸ್ಕಾರಕ್ಕೆ ನೂರಾರು ಜನ!
ಶ್ರೀನಗರ, ಏಪ್ರಿಲ್.10: ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಭಾರತ ಲಾಕ್ ಡೌನ್ ಘೋಷಿಸಲಾಗಿದೆ. ಇಷ್ಟಾದರೂ ಸಾರ್ವಜನಿಕರು ಕೇಂದ್ರ ಸರ್ಕಾರದ ನಿಯಮಗಳನ್ನು ಮೇಲಿಂದ ಮೇಲೆ ಉಲ್ಲಂಘಿಸುತ್ತಿದ್ದಾರೆ.
ಜಮ್ಮು-ಕಾಶ್ಮೀರದ ಸಪೋರ್ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಬಲಿಯಾದ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರ ಸಜಾದ್ ನವಾಬ್ ದಾರ್ ಅಂತ್ಯಕ್ರಿಯೆಯಲ್ಲಿ ನೂರಾರು ಜನರು ಭಾಗಿಯಾಗಿದ್ದು ಸ್ಥಳೀಯ ಆಡಳಿತ ಮಂಡಳಿಗೆ ತಲೆನೋವು ತಂದಿದೆ.
ಭಾರತ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಉಗ್ರನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ 90ಕ್ಕೂ ಹೆಚ್ಚು ಮಂದಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭಾರತ ಲಾಕ್ ಡೌನ್ ನಿಯಮ ಉಲ್ಲಂಘನೆ:
ಭಾರತ ಲಾಕ್ ಡೌನ್ ನಿಯಮಗಳನ್ನು ಪಾಲಿಸಿ ಉಗ್ರ ಸಜಾದ್ ನವಾಬ್ ದಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು. ಆದರೆ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇ ನೂರಾರು ಜನರು ನೆರೆದಿದ್ದು ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications