ಅನಂತ್ ನಾಗ್ ಸ್ಫೋಟದಲ್ಲಿ ಬಳಸಿದ್ದು ಮೇಡ್ ಇನ್ ಚೀನಾ ಸ್ಟೀಲ್ ಬುಲೆಟ್!
ಶ್ರೀನಗರ, ಜೂನ್ 20: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಜೂನ್ 17 ರಂದು ಸಿಆರ್ ಪಿಎಫ್ ಯೋಧರ ವಾಹನದ ಮೇಲೆ ನಡೆದ ಗುಂಡಿನ ದಾಳಿಗೆ ಬಳಸಿದ್ದು ಸ್ಟೀಲ್ ಬುಲೆಟ್ ಗಳನ್ನು ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.
ಮಾಮೂಲಿ ಬುಲೆಟ್ ಗಿಂತ ಹೆಚ್ಚು ಅಪಾಯಕಾರಿಯಾದ ಈ ಸ್ಟೀಲ್ ಬುಲೆಟ್ ಗಳು ಚೀನಾದಲ್ಲಿ ನಿರ್ಮಾಣವಾಗಿರುವಂಥವು ಎಂಬ ಅಂಶಗಳೂ ಪತ್ತೆಯಾಗಿವೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅರಿಹಾಲ್ ಗ್ರಾಮದಲ್ಲಿ ಸೇನೆಯ ವಿಶೇಷ ಪಡೆಗಳ ಬೆಂಗಾವಲು ವಾಹನದ ಮೇಲೆ ಈ ಸುಧಾರಿತ ಸ್ಫೋಟಕ(ಐಇಡಿ)ದ ಮೂಲಕ ಉಗ್ರರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರತಿ ದಾಳಿ ನಡೆಸಿದ್ದ ಒಂಬತ್ತು ಯೋಧರು ಗಾಯಗೊಂಡಿದ್ದರು.

ಮರುದಿನವೇ ಅವರಲ್ಲಿ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ದಾಳಿಯ ಸಮಯದಲ್ಲಿ ಓರ್ವ ಉಗ್ರನನ್ನೂ ಕೊಲ್ಲಲಾಗಿತ್ತು, ಮತ್ತು ಆತನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆತನ ಬಳಿ ಇದ್ದ ಸ್ಟೀಲ್ ಬುಲೆಟ್ ಸಹ ತನಿಖಾಧಿಕಾರಿಗಳ ಕಣ್ಣಿಗೆ ಬಿದ್ದಿದೆ.
ಬುಲೆಟ್ ಪ್ರೂಫ್ ಜಾಕೆಟ್ ಹಾಕಿದ್ದರೂ ಸಹ ಅದನ್ನು ತೂರಿಹೋಗುವ ಸಾಮರ್ಥ್ಯವಿರುವ ಈ ಸ್ಟೀಲ್ ಬುಲೆಟ್ ಗಳು ಭಾರೀ ಅಪಾಯಕಾರಿಯಾಗಿವೆ. ಆದ್ದರಿಂದಲೇ ಈ ಘಟನೆಯಲ್ಲಿ ಯೋಧರು ತೀವ್ರವಾಗಿ ಗಾಯಗೊಂಡಿದ್ದರು.
ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ತನ್ನ ದಾಳಿಯ ಸಂದರ್ಭದಲ್ಲೆಲ್ಲ ಇವೇ ಸ್ಟೀಲ್ ಬುಲೆಟ್ ಗಳನ್ನು ಬಳಸುತ್ತದೆ ಎನ್ನಲಾಗಿದೆ. ಡಿಸೆಂಬರ 27, 2017 ರಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಮೊದಲ ಬಾರಿಗೆ ಈ ಸ್ಟೀಲ್ ಬುಲೆಟ್ ಬಳಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications