ಉಗ್ರರನ್ನು 'ಮಣ್ಣಿನ ಮಕ್ಕಳು' ಎಂದ ಮೆಹಬೂಬಾ ಮುಫ್ತಿ!

ಶ್ರೀನಗರ, ಜನವರಿ 16: "ಜಮ್ಮು ಕಾಶೀರದ ಸ್ಥಳೀಯ ಭಯೋತ್ಪಾದಕರು ಮಣ್ಣಿನ ಮಕ್ಕಳು. ಅವರನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಬೇಕಿದೆ" ಎಂಬ ವಿವಾದಾತ್ಮಕ ಹೇಳಿಕೆಯನ್ನು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೀಡಿದ್ದಾರೆ.

ಉಗ್ರ ಮುಖಂಡರೊಂದಿಗೆ ಪಾಕಿಸ್ತಾನ, ಪ್ರತ್ಯೇಕತಾವಾದಿಗಳು ಮತ್ತು ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು. ಬಂದೂಕು ಸಂಸ್ಕೃತಿಯನ್ನು ಆರಂಭಿಸಿದ್ದು ಅವರು. ಅದನ್ನು ಅಂತ್ಯಗೊಳಿಸುವುದೂ ಅವರದೇ ಕೆಲಸ ಎಂದು ಮುಫ್ತಿ ಹೇಳಿದ್ದಾರೆ.

Mehbooba Mufti calls Local terrorists are sons of soil

ಸ್ಥಳೀಯ ಭಯೋತ್ಪಾದಕರು ಹಿಂಸೆಯ ಹಾದಿಯನ್ನು ತುಳಿಯಂದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ. ನಾನು 1996 ರಲ್ಲಿ ರಾಜಕೀಯಕ್ಕೆ ಬಂದಾಗಿನಿಂದಲೂ ಸ್ಥಳೀಯ ಉಗ್ರರನ್ನು 'ಮಣ್ಣಿನ ಮಕ್ಕಳು' ಎಂದೇ ಕರೆಯುತ್ತಿದ್ದೇನೆ. ಅವರನ್ನು ರಕ್ಷಿಸುವುದೇ ನಮ್ಮ ಆದ್ಯ ಕರ್ತವ್ಯವಾಗಬೇಕು. ಅವರು ನಮ್ಮ ಆಸ್ತಿ. ಕೇವಲ ಎನ್ ಕೌಂಟರ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅವರ ಮನಃಪರಿವರ್ತನೆಗೆ ಪ್ರಯತ್ನಿಸಬೇಕು" ಎಂದು ಮುಫ್ತಿ ಹೇಳಿದರು.

ಕಳೆದ ಅಕ್ಟೋಬರ್ ನಲ್ಲಿ ಎನ್ ಕೌಂಟರ್ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೋಸ್ಟ್ ವಾಂಟೆಂಡ್ ಉಗ್ರ ಮನನ್ ಬಶಿರ್ ವಾನಿ ಬಲಿಯಾದಾಗ ಸಂತಾಪ ಸೂಚಿಸುವ ಮೂಲಕ ಮುಫ್ತಿ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+