ಉಗ್ರರ ಹಾವಳಿ ಇರುವ ಪ್ರದೇಶದಲ್ಲಿ 'ಸೈನಿಕ' ಧೋನಿ ಗಸ್ತು
ಶ್ರೀನಗರ, ಆಗಸ್ಟ್ 1: ಪ್ರಾದೇಶಿಕ ಸೇನಾಪಡೆಯಲ್ಲಿ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಆಗಿರುವ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು, ಉಗ್ರರ ಹಾವಳಿ ಹೆಚ್ಚಾಗಿರುವ ದಕ್ಷಿಣ ಕಾಶ್ಮೀರದ ಭಾಗದಲ್ಲಿ ಇತರೆ ಸಾಮಾನ್ಯ ಸೈನಿಕರಂತೆಯೇ ಗಸ್ತು, ಕಾವಲು ಕರ್ತವ್ಯಗಳನ್ನು ಬುಧವಾರ ನಿರ್ವಹಿಸಿದರು.
ಸೇನಾ ಪಡೆಗಳೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಅವರು, ಆಗಸ್ಟ್ 15ರವರೆಗೂ 106 ಟಿಎ ಬಟಾಲಿಯನ್ನಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
'ಲೆಫ್ಟಿನೆಂಟ್ ಕರ್ನಲ್ ಧೋನಿ ಅವರು ಬುಧವಾರ ಬೆಳಿಗ್ಗೆ ಇಲ್ಲಿಗೆ ಬಂದು, ತಮ್ಮ ತಂಡವನ್ನು ಸೇರಿಕೊಂಡರು' ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ವಿಕ್ಟರ್ ಫೋರ್ಸ್ನ ಭಾಗವಾಗಿ ಉಗ್ರರ ಚಟುವಟಿಕೆ ತೀವ್ರವಾಗಿರುವ ದಕ್ಷಿಣ ಕಾಶ್ಮೀರ ಪ್ರದೇಶದಲ್ಲಿ ಈ ತಂಡವನ್ನು ನಿಯೋಜಿಸಲಾಗಿದೆ. ಧೋನಿ ಅವರ ಮನವಿ ಮೇರೆಗೆ ಕಳೆದ ವಾರ ಸೇನಾ ಪ್ರಧಾನ ಕಚೇರಿಯು ಎರಡು ವಾರ ತಮ್ಮ ತಂಡದೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿತ್ತು.
ಧೋನಿ ಅವರಿಗೆ 2011ರಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಯ ಗೌರವ ನೀಡಲಾಗಿತ್ತು. ಐದು ಪ್ಯಾರಾಚೂಟ್ ತರಬೇತಿ ಜಿಗಿತಗಳನ್ನು ಪೂರೈಸಿದ ಬಳಿಕ ಅವರನ್ನು ಅರ್ಹ ಪ್ಯಾರಾಟ್ರೂಪರ್ ಎಂದು ಪರಿಗಣಿಸಲಾಗಿತ್ತು.
ಧೋನಿ ಅವರು ವೆಸ್ಟ್ ಇಂಡೀಟ್ ಕ್ರಿಕೆಟ್ ಸರಣಿಯಲ್ಲಿ ಆಡುತ್ತಿಲ್ಲ. ಬದಲು ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದರ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಹಾಗೆಯೇ ಅವರ ನಡೆ ಬಗ್ಗೆ ಟೀಕೆಗಳೂ ವ್ಯಕ್ತವಾಗಿದೆ. ಕೆಲವರು ಅವರು ಪ್ರಚಾರಕ್ಕಾಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications