ಮೆಹಬೂಬಾ ಮುಫ್ತಿಯನ್ನು ಬಂಧಿಸಿಲ್ಲ: ಕಾಶ್ಮೀರ ಚುನಾವಣಾ ಆಯುಕ್ತ
ಶ್ರೀನಗರ, ನವೆಂಬರ್ 28: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ತಮ್ಮನ್ನು ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ, ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಚುನಾವಣಾ ಆಯುಕ್ತ ಕೆಕೆ ಶರ್ಮಾ, ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ. ಅವರು ಪುಲ್ವಾಮಕ್ಕೆ ತೆರಳುವವರಿದ್ದರು. ಆದರೆ ಭದ್ರತಾ ದೃಷ್ಟಿಯಿಂದ ಪುಲ್ವಾಮಗೆ ತೆರಳಬೇಡಿ ಎಂದಷ್ಟೇ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನ.27 ರಂದು ಮೆಹಬೂಬಾ ಮುಫ್ತಿ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವುದಕ್ಕೆ ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದ್ದರು.

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ(ಡಿಸಿಸಿ) ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.
ಕೇಂದ್ರಾಡಳಿತ ಪ್ರದೇಶದ 280 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ಗಂಟೆಗೆ ಮುಕ್ತಾಯಗೊಳ್ಳಲಿದೆ. 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 19ಕ್ಕೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 22ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇನ್ನು ಈ ಕೇಂದ್ರಾಡಳಿತ ಪ್ರದೇಶದ 234 ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ಒಟ್ಟಿಗೆ ಚುನಾವಣೆ ನಡೆಯುತ್ತಿದೆ.
ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ಪೀಪಲ್ಸ್ ಕಾನ್ಫರೆನ್ಸ್ ಮತ್ತು ಸಿಪಿಎಂ ಒಟ್ಟು ಸೇರಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಶನ್ ಎಂದು ಮೈತ್ರಿಕೂಟ ಮಾಡಿಕೊಂಡಿದ್ದು ಈ ಎಲ್ಲಾ ಪಕ್ಷಗಳು ಒಟ್ಟು ಸೇರಿ ಡಿಡಿಸಿ ಚುನಾವಣೆಗೆ ಸ್ಪರ್ಧಿಸುತ್ತಿವೆ.
ಎನ್ಐಎ ವಶಕ್ಕೆ ಪಡೆದಿರುವ ಪಿಡಿಪಿ ನಾಯಕ ವಾಹೀದ್ ಪರ್ರಾ ಅವರ ಪುಲ್ವಾಮದಲ್ಲಿರುವ ನಿವಾಸಕ್ಕೆ ಮೆಹಬೂಬಾ ಮುಫ್ತಿ ಭೇಟಿ ನೀಡುವವರಿದ್ದರು. ಆದರೆ ಇದಕ್ಕೆ ಅವಕಾಶ ನೀಡಲಾಗಿಲ್ಲ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications