ಮೆಹಬೂಬಾ ಮುಫ್ತಿಯನ್ನು ಬಂಧಿಸಿಲ್ಲ: ಕಾಶ್ಮೀರ ಚುನಾವಣಾ ಆಯುಕ್ತ
ಶ್ರೀನಗರ, ನವೆಂಬರ್ 28: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.
ತಮ್ಮನ್ನು ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ, ಬಂಧಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಚುನಾವಣಾ ಆಯುಕ್ತ ಕೆಕೆ ಶರ್ಮಾ, ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ. ಅವರು ಪುಲ್ವಾಮಕ್ಕೆ ತೆರಳುವವರಿದ್ದರು. ಆದರೆ ಭದ್ರತಾ ದೃಷ್ಟಿಯಿಂದ ಪುಲ್ವಾಮಗೆ ತೆರಳಬೇಡಿ ಎಂದಷ್ಟೇ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನ.27 ರಂದು ಮೆಹಬೂಬಾ ಮುಫ್ತಿ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವುದಕ್ಕೆ ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದ್ದರು.

ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ(ಡಿಸಿಸಿ) ಮೊದಲ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.
ಕೇಂದ್ರಾಡಳಿತ ಪ್ರದೇಶದ 280 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ಗಂಟೆಗೆ ಮುಕ್ತಾಯಗೊಳ್ಳಲಿದೆ. 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 19ಕ್ಕೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 22ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇನ್ನು ಈ ಕೇಂದ್ರಾಡಳಿತ ಪ್ರದೇಶದ 234 ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ಒಟ್ಟಿಗೆ ಚುನಾವಣೆ ನಡೆಯುತ್ತಿದೆ.
ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ಪೀಪಲ್ಸ್ ಕಾನ್ಫರೆನ್ಸ್ ಮತ್ತು ಸಿಪಿಎಂ ಒಟ್ಟು ಸೇರಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಶನ್ ಎಂದು ಮೈತ್ರಿಕೂಟ ಮಾಡಿಕೊಂಡಿದ್ದು ಈ ಎಲ್ಲಾ ಪಕ್ಷಗಳು ಒಟ್ಟು ಸೇರಿ ಡಿಡಿಸಿ ಚುನಾವಣೆಗೆ ಸ್ಪರ್ಧಿಸುತ್ತಿವೆ.
ಎನ್ಐಎ ವಶಕ್ಕೆ ಪಡೆದಿರುವ ಪಿಡಿಪಿ ನಾಯಕ ವಾಹೀದ್ ಪರ್ರಾ ಅವರ ಪುಲ್ವಾಮದಲ್ಲಿರುವ ನಿವಾಸಕ್ಕೆ ಮೆಹಬೂಬಾ ಮುಫ್ತಿ ಭೇಟಿ ನೀಡುವವರಿದ್ದರು. ಆದರೆ ಇದಕ್ಕೆ ಅವಕಾಶ ನೀಡಲಾಗಿಲ್ಲ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications