ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರಿಗಳನ್ನು ಪ್ರಾಣಿಗಳಂತೆ ಬಂಧಿಸಿಟ್ಟಿದ್ದಾರೆ: ಅಮಿತ್‌ ಶಾ ಗೆ ಮುಫ್ತಿ ಮಗಳ ಪತ್ರ

|
Google Oneindia Kannada News

ನವದೆಹಲಿ, ಆಗಸ್ಟ್ 16: ಕಾಶ್ಮೀರಿಗಳನ್ನು ಪ್ರಾಣಿಗಳ ರೀತಿ ಬಂಧಿಸಿಟ್ಟಿದ್ದಾರೆ, ಕನಿಷ್ಠ ಮಾನವ ಹಕ್ಕುಗಳಿಗೂ ಬೆಲೆ ನೀಡಬಾರದೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮಗಳು ಇಲ್ತಿಜಾ ಅಮಿತ್ ಶಾ ಗೆ ಪತ್ರಬರೆದಿದ್ದಾರೆ.

ಇಡೀ ಭಾರತವೇ ಸ್ವಾತಂತ್ರ್ಯ ದಿನ ಆಚರಣೆ ಮಾಡುತ್ತಿರುವ ಹೊತ್ತಿನಲ್ಲಿ, ಕಾಶ್ಮೀರಿಗಳನ್ನು ಪ್ರಾಣಿಗಳ ರೀತಿ ಬಂಧಿಸಿಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ವಿಚಾರ, ಸರ್ಕಾರಕ್ಕೆ ಕಾಲಾವಕಾಶ ಬೇಕು: ಸುಪ್ರೀಂ ಜಮ್ಮು ಮತ್ತು ಕಾಶ್ಮೀರ ಸೂಕ್ಷ್ಮ ವಿಚಾರ, ಸರ್ಕಾರಕ್ಕೆ ಕಾಲಾವಕಾಶ ಬೇಕು: ಸುಪ್ರೀಂ

''ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ, ಕರೆ ಮಾಡಲು ಕೂಡ ಸಾಧ್ಯವಾಗುತ್ತಿಲ್ಲ, ಅವರು ಈಗ ಯಾವುದೇ ಪಕ್ಷವನ್ನು ಪ್ರತಿನಿಧಿಸುತ್ತಿಲ್ಲ. ಕೆಲವು ಭದ್ರತಾ ಸಿಬ್ಬಂದಿಗಳು ಹೇಳುವ ಪ್ರಕಾರ ಮುಫ್ತಿಯವರ ಬಂಧನಕ್ಕೆ ಮಾಧ್ಯಮಗಳಿಗೆ ನೀಡಿದ ಸಂದರ್ಶನವೇ ಕಾರಣವಂತೆ'' ಎಂದು ಇಲ್ತಿಜಾ ಪತ್ರದಲ್ಲಿ ಬರೆದಿದ್ದಾರೆ.

Muftis Daughter Writes A Letter To Amit Shah

ಅಂಚೆ ಸೇವೆ ಕೂಡ ಸ್ಥಗಿತಗೊಂಡಿರುವುದರಿಂದ ಅಮಿತ್ ಶಾ ಅವರಿಗೆ ಪತ್ರ ರವಾನಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಎಲ್ಲಾ ನಿರ್ಬಂಧ ತೆರವು: ಸುಪ್ರೀಂಗೆ ಕೇಂದ್ರ ಹೇಳಿದ್ದೇನು? ಜಮ್ಮು ಕಾಶ್ಮೀರದಲ್ಲಿ ಎಲ್ಲಾ ನಿರ್ಬಂಧ ತೆರವು: ಸುಪ್ರೀಂಗೆ ಕೇಂದ್ರ ಹೇಳಿದ್ದೇನು?

ಇಂದು 12ನೇ ದಿನವೂ ಕೂಡ ಕಾಶ್ಮೀರದಲ್ಲಿ ನಿರ್ಬಂಧ ಮುಂದುವರೆದಿದೆ. ಆದರೆ ಕರ್ಫ್ಯೂ ಹಿಂಪಡೆಯಲಾಗಿದೆ. ಜನರು ನಗರದಲ್ಲಿ ಮಾತ್ರ ಓಡಾಡಿಕೊಂಡಿರಬಹುದು. ಆದರೆ ಗುಂಪು ಕಟ್ಟಿಕೊಂಡು ಓಡಾಡುವಂತಿಲ್ಲ.

ಶೀಘ್ರವೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

English summary
Mehbooba Mufti's daughter Iltija has written a letter to Amit Shah regarding restrictions on the people in Kashmir Valley.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X