ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು 150 ಉಗ್ರರು ಕಾಯುತ್ತಿದ್ದಾರೆ: ಸೇನಾ ಅಧಿಕಾರಿ
ಶ್ರೀನಗರ, ಜೂನ್ 25: ಜಮ್ಮು ಮತ್ತು ಕಾಶ್ಮೀರದೊಳಗೆ ನುಸುಳಲು ಸುಮಾರು 150 ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಮೂಲಕ ಲಾಂಚ್ಪ್ಯಾಡ್ಗಳಲ್ಲಿ ಕಾಯುತ್ತಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಎಲ್ಒಸಿಯ ಇನ್ನೊಂದು ಬದಿಯಲ್ಲಿರುವ ಹನ್ನೊಂದು ಭಯೋತ್ಪಾದಕ ಶಿಬಿರಗಳಲ್ಲಿ ಸುಮಾರು 500 ರಿಂದ 700 ಭಯೋತ್ಪಾದಕರು ತರಬೇತಿ ಪಡೆಯುತ್ತಿದ್ದಾರೆ ಎಂದು ಸೇನಾ ಅಧಿಕಾರಿ ತಿಳಿಸಿದ್ದಾರೆ, ಆದರೆ ಭದ್ರತಾ ಪಡೆಗಳು ಉಗ್ರರ ಹಲವಾರು ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿವೆ.
ಎಲ್ಒಸಿಯಾದ್ಯಂತ ಮನ್ಶೇರಾ, ಕೋಟ್ಲಿ ಮತ್ತು ಮುಜಫರಾಬಾದ್ನಲ್ಲಿರುವ 11 ತರಬೇತಿ ಶಿಬಿರಗಳಲ್ಲಿ ಸುಮಾರು 500 ರಿಂದ 700 ಜನರಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಸೇನಾ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಈ ವರ್ಷ ಇಲ್ಲಿಯವರೆಗೆ ಕಾಶ್ಮೀರ ಕಣಿವೆಯಲ್ಲಿ ಎಲ್ಒಸಿಯ ಉದ್ದಕ್ಕೂ ಯಾವುದೇ ಭಯೋತ್ಪಾದಕರು ಒಳನುಸುಳುವಲ್ಲಿ ಯಶಸವಿಯಾಗಿಲ್ಲ ಎಂದು ಅಧಿಕಾರಿ ಒತ್ತಿ ಹೇಳಿದ್ದಾರೆ.
ಮೇ ಅಂತ್ಯದವರೆಗೆ, ಯಾವು ಅನಾಹುಗಲೂ ನಡೆದಿಲ್ಲ, ಒಮ್ಮೆ ಮಾತ್ರ ಭಯೋತ್ಪಾದಕರ ಗುಂಪು ಬಂದಿತ್ತು ಮತ್ತು ಬಂಡಿಪೋರಾ ಮತ್ತು ಸೋಪೋರ್ನಲ್ಲಿ ಆ ಗುಂಪನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅವರು ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ವಿದೇಶಿ ಉಗ್ರರನ್ನು ಕೊಂದಿದ್ದಾರೆ ಎಂದು ಹೇಳಿದರು.
ಒಳನುಸುಳುವಿಕೆ ಪ್ರಮಾಣ ಕಡಿಮೆ
ಸೇನಾ ಅಧಿಕಾರಿಯ ಪ್ರಕಾರ, ಭಯೋತ್ಪಾದಕರು ಹೊಸದಾಗಿ ಒಳನುಸುಳುವಿಕೆ ಮಾರ್ಗಗಳ ಮೇಲೆ ಗಮನ ಹರಿಸುತ್ತಿದ್ದಾರೆ, ಏಕೆಂದರೆ ಅಸ್ತಿತ್ವದಲ್ಲಿರುವ ಒಳನುಸುಳುವಿಕೆ ಮಾರ್ಗಗಳು ಭದ್ರತಾ ಪಡೆಗಳಿಗೆ ತಿಳಿದಿರುತ್ತವೆ ಎಂದಿದ್ದಾರೆ.
"ಉಗ್ರರ ನುಸುಳುವಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸುವ ವ್ಯವಸ್ಥೆಯನ್ನು ನಾವು ಜಾರಿಗೆ ತಂದಿದ್ದೇವೆ ಎಂದು ನಾನು ಹೇಳುತ್ತಿಲ್ಲ, ಹೌದು, ಇಲ್ಲಿ ನುಸುಳುವಿಕೆ ನಡೆಯುವ ಸಾಧ್ಯತೆಯಿದೆ, ಆದರೆ ಇತ್ತೀಚಿನ ವರ್ಷಗಳಲ್ಲಿ ನಾವು ಬೇಲಿಯನ್ನು ಬಲಪಡಿಸಿದ ರೀತಿ, ನಿಯೋಜನೆ ಕಣ್ಗಾವಲು ಉಪಕರಣಗಳನ್ನು ಒಳಗೊಂಡಂತೆ ಮಾಡಿರುವ ಮಾರ್ಪಾಟುಗಳು, ಒಳನುಸುಳುವಿಕೆಯ ಯಶಸ್ಸಿನ ಪ್ರಮಾಣವನ್ನು ಕಡಿಮೆ ಮಾಡಿದೆ" ಎಂದು ಅವರು ಹೇಳಿದರು.

"ಇದರ ಪರಿಣಾಮವಾಗಿ ಏನಾಗುತ್ತದೆಯೆಂದರೆ, ಒಂದು ಕಡೆ ಒತ್ತಡವಿದ್ದಾಗ, ಅವರು ಇತರ ಬದಿಗಳಲ್ಲಿ, ಪರ್ಯಾಯ ಮಾರ್ಗಗಳನ್ನು ಪ್ರಯತ್ನಿಸುತ್ತಾರೆ. ಉಗ್ರರು ಈಗ ರಾಜೌರಿ-ಪೂಂಚ್ ಮಾರ್ಗಗಳಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ, ಪೀರ್ ಪಂಜಾಲ್ನ ದಕ್ಷಿಣದ ಪ್ರದೇಶಗಳು ಇತರ ಮಾರ್ಗಗಳಿಗೆ ಹೋಲಿಸಿದರೆ ಕಾಶ್ಮೀರ ಕಣಿವೆಯಲ್ಲಿ ಒಳನುಸುಳುವಿಕೆ ಕಡಿಮೆಯಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.
ಭಯೋತ್ಪಾದಕರ ಒಳನುಸುಳುವಿಕೆಯನ್ನು ನಿರ್ಬಂಧಿಸಲು ಸೇನೆ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಇಷ್ಟಾದರೂ ಪಾಕಿಸ್ತಾನದ ಕುಮ್ಮಕ್ಕಿನಿಂದ ಹಲವು ಭಯೋತ್ಪಾದಕರು ಭಾರತಕ್ಕೆ ನುಸುಳಿ ದುಷ್ಕೃತ್ಯ ಎಸಗಲು ಯತ್ನದಲ್ಲಿ ಭಾರತೀಯ ಸೈನಿಕರ ಗುಂಡಿಗೆ ಬಲಿಯಾಗುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications