ಅಮರನಾಥ ಯಾತ್ರಿಕರಿಗೆ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ
ಶ್ರೀನಗರ, ಜುಲೈ 05: ಪ್ರತಿವರ್ಷ ಬೇಸಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಪವಿತ್ರ ಅಮರನಾಥ ಯಾತ್ರೆ ಸಂದರ್ಭಕ್ಕೆ ನೆಟ್ವರ್ಕ್ ಕಿರಿಕಿರಿ ಸಾಮಾನ್ಯ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಳಕೆಗಾಗಿ ಜಿಯೋ ರೂ. 102 ಮುಖಬೆಲೆಯ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದೆ.
ಅಪರಿಮಿತ ವಾಯ್ಸ್ ಕರೆಗಳು (ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ), ಅಪರಿಮಿತ ಎಸ್ಸೆಮ್ಮೆಸ್ (ದಿನಕ್ಕೆ 100), ಅಪರಿಮಿತ ಡೇಟಾ (ದಿನಕ್ಕೆ 0.5 ಜಿಬಿ ಅತಿವೇಗದ ಡೇಟಾ ಮತ್ತು ಆನಂತರ 64 ಕೆಬಿಪಿಎಸ್ನಲ್ಲಿ ಅಪರಿಮಿತ ಡೇಟಾ) ಸೇರಿದಂತೆ ಬಳಕೆದಾರರಿಗೆ ಅಪರಿಮಿತ ವಾಯ್ಸ್ ಹಾಗೂ ಡೇಟಾ ಅನುಕೂಲಗಳನ್ನು ಈ ಪ್ಲಾನ್ ನೀಡಲಿದೆ. ಇದರ ವ್ಯಾಲಿಡಿಟಿ 7 ದಿನಗಳ ಕಾಲ ಇರಲಿದೆ.
ದೇಶದ ವಿವಿಧ ಭಾಗಗಳಿಂದ ಅಮರನಾಥ ಯಾತ್ರೆಗೆಂದು ಬರುವ, ಪ್ರೀಪೇಯ್ಡ್ ಮೊಬೈಲ್ ಸಂಪರ್ಕ ಬಳಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಹೊಸ ಪ್ಲಾನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಹೊರರಾಜ್ಯಗಳ ಚಂದಾದಾರರು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರೀಪೇಯ್ಡ್ ರೋಮಿಂಗ್ ಸೌಲಭ್ಯ ಬಳಸಲು ನಿರ್ಬಂಧವಿರುವುದರಿಂದ ಯಾತ್ರಾರ್ಥಿಗಳು ಸಂಪರ್ಕದಲ್ಲಿ ಅಡಚಣೆ ಅನುಭವಿಸಬೇಕಾಗುತ್ತದೆ. ಅದಕ್ಕಾಗಿಯೇ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿಕೊಡುವ ಸಂದರ್ಭದಲ್ಲಿ ಅಲ್ಪಕಾಲೀನ ಪ್ರೀಪೇಯ್ಡ್ ಪ್ಲಾನ್ ಜೊತೆಗೆ ಹೊಸ ಸಂಪರ್ಕವನ್ನು ಪಡೆದುಕೊಳ್ಳುತ್ತಾರೆ.

ಅವರು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸ್ಥಳೀಯ ಜಿಯೋ ಸಂಪರ್ಕ ಪಡೆದುಕೊಳ್ಳಬಹುದಾಗಿದ್ದು ಹಣಕ್ಕೆ ಅಧಿಕ ಮೌಲ್ಯ ನೀಡುವ 7-ದಿನಗಳ ಅಪರಿಮಿತ ಪ್ರೀಪೇಯ್ಡ್ ಪ್ಲಾನ್ ಬಳಸಿ ತಮ್ಮ ಯಾತ್ರೆಯ ಸಂದರ್ಭದಲ್ಲಿ ಅಡಚಣೆರಹಿತ ಸಂಪರ್ಕ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಈ ಹೊಸ ಪ್ಲಾನ್ ಅನ್ನು ಜಮ್ಮು ಮತ್ತು ಕಾಶ್ಮೀರದ ಹಲವು ಜಿಯೋ ರೀಟೇಲರ್ಗಳಲ್ಲಿ ಪಡೆದುಕೊಳ್ಳಬಹುದಾಗಿದ್ದು, ಇದು ಅಮರನಾಥ ಯಾತ್ರೆಯ ಪೂರ್ಣ ಅವಧಿಯವರೆಗೂ ಲಭ್ಯವಿರುತ್ತದೆ.
ಜಿಯೋ ಪ್ರೈಮ್ ಸದಸ್ಯತ್ವ ಇಲ್ಲದೆಯೇ ಈ ಹೊಸ ಪ್ಲಾನ್ ಅನ್ನು ಪಡೆದುಕೊಳ್ಳಬಹುದಾಗಿದ್ದು, ಆ ಕಾರಣದಿಂದಾಗಿ ಇದರೊಡನೆ ಜಿಯೋ ಆಪ್ಸ್ ಚಂದಾದಾರಿಕೆ ಲಭ್ಯವಿರುವುದಿಲ್ಲ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications