ಅಮರನಾಥ ಯಾತ್ರಿಕರಿಗೆ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದ ಜಿಯೋ
ಶ್ರೀನಗರ, ಜುಲೈ 05: ಪ್ರತಿವರ್ಷ ಬೇಸಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಪವಿತ್ರ ಅಮರನಾಥ ಯಾತ್ರೆ ಸಂದರ್ಭಕ್ಕೆ ನೆಟ್ವರ್ಕ್ ಕಿರಿಕಿರಿ ಸಾಮಾನ್ಯ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಳಕೆಗಾಗಿ ಜಿಯೋ ರೂ. 102 ಮುಖಬೆಲೆಯ ಪ್ರೀಪೇಯ್ಡ್ ಪ್ಲಾನ್ ಪರಿಚಯಿಸಿದೆ.
ಅಪರಿಮಿತ ವಾಯ್ಸ್ ಕರೆಗಳು (ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ), ಅಪರಿಮಿತ ಎಸ್ಸೆಮ್ಮೆಸ್ (ದಿನಕ್ಕೆ 100), ಅಪರಿಮಿತ ಡೇಟಾ (ದಿನಕ್ಕೆ 0.5 ಜಿಬಿ ಅತಿವೇಗದ ಡೇಟಾ ಮತ್ತು ಆನಂತರ 64 ಕೆಬಿಪಿಎಸ್ನಲ್ಲಿ ಅಪರಿಮಿತ ಡೇಟಾ) ಸೇರಿದಂತೆ ಬಳಕೆದಾರರಿಗೆ ಅಪರಿಮಿತ ವಾಯ್ಸ್ ಹಾಗೂ ಡೇಟಾ ಅನುಕೂಲಗಳನ್ನು ಈ ಪ್ಲಾನ್ ನೀಡಲಿದೆ. ಇದರ ವ್ಯಾಲಿಡಿಟಿ 7 ದಿನಗಳ ಕಾಲ ಇರಲಿದೆ.
ದೇಶದ ವಿವಿಧ ಭಾಗಗಳಿಂದ ಅಮರನಾಥ ಯಾತ್ರೆಗೆಂದು ಬರುವ, ಪ್ರೀಪೇಯ್ಡ್ ಮೊಬೈಲ್ ಸಂಪರ್ಕ ಬಳಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಈ ಹೊಸ ಪ್ಲಾನ್ ಅನ್ನು ವಿನ್ಯಾಸಗೊಳಿಸಲಾಗಿದೆ. ಹೊರರಾಜ್ಯಗಳ ಚಂದಾದಾರರು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರೀಪೇಯ್ಡ್ ರೋಮಿಂಗ್ ಸೌಲಭ್ಯ ಬಳಸಲು ನಿರ್ಬಂಧವಿರುವುದರಿಂದ ಯಾತ್ರಾರ್ಥಿಗಳು ಸಂಪರ್ಕದಲ್ಲಿ ಅಡಚಣೆ ಅನುಭವಿಸಬೇಕಾಗುತ್ತದೆ. ಅದಕ್ಕಾಗಿಯೇ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿಕೊಡುವ ಸಂದರ್ಭದಲ್ಲಿ ಅಲ್ಪಕಾಲೀನ ಪ್ರೀಪೇಯ್ಡ್ ಪ್ಲಾನ್ ಜೊತೆಗೆ ಹೊಸ ಸಂಪರ್ಕವನ್ನು ಪಡೆದುಕೊಳ್ಳುತ್ತಾರೆ.

ಅವರು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸ್ಥಳೀಯ ಜಿಯೋ ಸಂಪರ್ಕ ಪಡೆದುಕೊಳ್ಳಬಹುದಾಗಿದ್ದು ಹಣಕ್ಕೆ ಅಧಿಕ ಮೌಲ್ಯ ನೀಡುವ 7-ದಿನಗಳ ಅಪರಿಮಿತ ಪ್ರೀಪೇಯ್ಡ್ ಪ್ಲಾನ್ ಬಳಸಿ ತಮ್ಮ ಯಾತ್ರೆಯ ಸಂದರ್ಭದಲ್ಲಿ ಅಡಚಣೆರಹಿತ ಸಂಪರ್ಕ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಈ ಹೊಸ ಪ್ಲಾನ್ ಅನ್ನು ಜಮ್ಮು ಮತ್ತು ಕಾಶ್ಮೀರದ ಹಲವು ಜಿಯೋ ರೀಟೇಲರ್ಗಳಲ್ಲಿ ಪಡೆದುಕೊಳ್ಳಬಹುದಾಗಿದ್ದು, ಇದು ಅಮರನಾಥ ಯಾತ್ರೆಯ ಪೂರ್ಣ ಅವಧಿಯವರೆಗೂ ಲಭ್ಯವಿರುತ್ತದೆ.
ಜಿಯೋ ಪ್ರೈಮ್ ಸದಸ್ಯತ್ವ ಇಲ್ಲದೆಯೇ ಈ ಹೊಸ ಪ್ಲಾನ್ ಅನ್ನು ಪಡೆದುಕೊಳ್ಳಬಹುದಾಗಿದ್ದು, ಆ ಕಾರಣದಿಂದಾಗಿ ಇದರೊಡನೆ ಜಿಯೋ ಆಪ್ಸ್ ಚಂದಾದಾರಿಕೆ ಲಭ್ಯವಿರುವುದಿಲ್ಲ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications