ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
ಶ್ರೀನಗರ, ಮಾರ್ಚ್ 07: ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳ ಕಾಶ್ಮೀರವಾಗಿ ಬದಲಾಗುತ್ತದೆ ಎಂಬ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿಕೆಗೆ ತಿರುಗೇಟು ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, "ಪಶ್ಚಿಮ ಬಂಗಾಳ ಕಾಶ್ಮೀರವಾಗಿ ಬದಲಾಗುವುದರಲ್ಲಿ ಏನಾದರೂ ತಪ್ಪಿದೆಯೇ?" ಎಂದು ಪ್ರಶ್ನಿಸಿದ್ದಾರೆ.
ಸುವೇಂದು ಅಧಿಕಾರಿ ಹೇಳಿಕೆಯನ್ನು ಮೂರ್ಖತನ ಎಂದಿರುವ ಒಮರ್, 2019ರ ಆಗಸ್ಟ್ನಲ್ಲಿ 370ನೇ ವಿಧಿ ರದ್ದತಿ ನಂತರ ಕಾಶ್ಮೀರ ಸ್ವರ್ಗವಾಗಿದೆ ಎಂದು ಬಿಜೆಪಿಯೇ ಹೇಳಿಕೊಂಡಿತ್ತಲ್ಲವೇ ಎಂದಿದ್ದಾರೆ.
"ನಿಮ್ಮ ಪ್ರಕಾರ 2019ರ ಆಗಸ್ಟ್ ನಂತರ ಕಾಶ್ಮೀರ ಸ್ವರ್ಗವಾಗಿದೆ. ಹೀಗಿದ್ದಾಗ ಪಶ್ಚಿಮ ಬಂಗಾಳ ಕಾಶ್ಮೀರವಾಗುವುದರಲ್ಲಿ ತಪ್ಪೇನಿದೆ? ಬಂಗಾಳಿಗಳಿಗೆ ಕಾಶ್ಮೀರವೆಂದರೆ ಇಷ್ಟ. ಇಲ್ಲಿಗೆ ಬಂಗಾಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ನಿಮ್ಮ ಮೂರ್ಖತನವನ್ನು, ಈ ಹೇಳಿಕೆಯನ್ನು ಕ್ಷಮಿಸಿ ಬಿಡುತ್ತೇವೆ" ಎಂದು ಹೇಳಿದ್ದಾರೆ.

ಮಾರ್ಚ್ 27ರಿಂದ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಿಂದ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಶನಿವಾರ ಚುನಾವಣಾ ಮೆರವಣಿಗೆಯಲ್ಲಿ ಟಿಎಂಸಿ ವಿರುದ್ಧ ಮಾತನಾಡಿದ್ದ ಸುವೇಂದು, "ಶ್ಯಾಮ ಪ್ರಸಾದ್ ಮುಖರ್ಜಿ ಇಲ್ಲದೇ ಇದ್ದಿದ್ದರೆ, ಈ ದೇಶ ಇಸ್ಲಾಂ ದೇಶವಾಗುತ್ತಿತ್ತು. ಬಾಂಗ್ಲಾದೇಶದಲ್ಲಿ ನಾವು ಬದುಕಬೇಕಿತ್ತು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳ ಕಾಶ್ಮೀರವಾಗುತ್ತದೆ" ಎಂದು ಹೇಳಿಕೆ ನೀಡಿದ್ದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications