ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
ಶ್ರೀನಗರ, ಮಾರ್ಚ್ 07: ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳ ಕಾಶ್ಮೀರವಾಗಿ ಬದಲಾಗುತ್ತದೆ ಎಂಬ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿಕೆಗೆ ತಿರುಗೇಟು ನೀಡಿರುವ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, "ಪಶ್ಚಿಮ ಬಂಗಾಳ ಕಾಶ್ಮೀರವಾಗಿ ಬದಲಾಗುವುದರಲ್ಲಿ ಏನಾದರೂ ತಪ್ಪಿದೆಯೇ?" ಎಂದು ಪ್ರಶ್ನಿಸಿದ್ದಾರೆ.
ಸುವೇಂದು ಅಧಿಕಾರಿ ಹೇಳಿಕೆಯನ್ನು ಮೂರ್ಖತನ ಎಂದಿರುವ ಒಮರ್, 2019ರ ಆಗಸ್ಟ್ನಲ್ಲಿ 370ನೇ ವಿಧಿ ರದ್ದತಿ ನಂತರ ಕಾಶ್ಮೀರ ಸ್ವರ್ಗವಾಗಿದೆ ಎಂದು ಬಿಜೆಪಿಯೇ ಹೇಳಿಕೊಂಡಿತ್ತಲ್ಲವೇ ಎಂದಿದ್ದಾರೆ.
"ನಿಮ್ಮ ಪ್ರಕಾರ 2019ರ ಆಗಸ್ಟ್ ನಂತರ ಕಾಶ್ಮೀರ ಸ್ವರ್ಗವಾಗಿದೆ. ಹೀಗಿದ್ದಾಗ ಪಶ್ಚಿಮ ಬಂಗಾಳ ಕಾಶ್ಮೀರವಾಗುವುದರಲ್ಲಿ ತಪ್ಪೇನಿದೆ? ಬಂಗಾಳಿಗಳಿಗೆ ಕಾಶ್ಮೀರವೆಂದರೆ ಇಷ್ಟ. ಇಲ್ಲಿಗೆ ಬಂಗಾಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ನಿಮ್ಮ ಮೂರ್ಖತನವನ್ನು, ಈ ಹೇಳಿಕೆಯನ್ನು ಕ್ಷಮಿಸಿ ಬಿಡುತ್ತೇವೆ" ಎಂದು ಹೇಳಿದ್ದಾರೆ.

ಮಾರ್ಚ್ 27ರಿಂದ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಿಂದ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಶನಿವಾರ ಚುನಾವಣಾ ಮೆರವಣಿಗೆಯಲ್ಲಿ ಟಿಎಂಸಿ ವಿರುದ್ಧ ಮಾತನಾಡಿದ್ದ ಸುವೇಂದು, "ಶ್ಯಾಮ ಪ್ರಸಾದ್ ಮುಖರ್ಜಿ ಇಲ್ಲದೇ ಇದ್ದಿದ್ದರೆ, ಈ ದೇಶ ಇಸ್ಲಾಂ ದೇಶವಾಗುತ್ತಿತ್ತು. ಬಾಂಗ್ಲಾದೇಶದಲ್ಲಿ ನಾವು ಬದುಕಬೇಕಿತ್ತು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳ ಕಾಶ್ಮೀರವಾಗುತ್ತದೆ" ಎಂದು ಹೇಳಿಕೆ ನೀಡಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications