ಗೃಹಬಂಧನ ಬಿಡುಗಡೆಯಾದ ಒಮರ್ಗೆ ಲಾಕ್ಡೌನ್ ಸ್ವಾಗತ
ಶ್ರೀನಗರ, ಮಾರ್ಚ್ 24: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಲು ಮುಂದಾಗಿದ್ದ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಮಾಜಿ ಸಿಎಂ ಒಮರ್ ಅಬ್ದುಲ್ಲಾರನ್ನು ಗೃಹಬಂಧನದಲ್ಲಿರಿಸಲಾಗಿತ್ತು. ಸುಮಾರು 8 ತಿಂಗಳ ಬಳಿಕ ಮಾರ್ಚ್ 24ರಂದು ಬಿಡುಗಡೆಗೊಂಡ ಒಮರ್ ಅವರಿಗೆ ಲಾಕ್ಡೌನ್ ಸ್ವಾಗತ ಸಿಕ್ಕಿದೆ. ದೇಶದೆಲ್ಲೆಡೆ ಕೊರೊನಾವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದೆ.
ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಫೆಬ್ರವರಿ 05ರಂದು ಬಂಧನಕ್ಕೊಳಗಾಗಿದ್ದ ಒಮರ್ ರನ್ನು ಬಿಡುಗಡೆ ಮಾಡಲಾಗಿದೆ. ಪಿಎಸ್ಎ ಕಾಯ್ದೆ ಪ್ರಕಾರ, ಇದರ ಅಡಿ ಬಂಧಿಸಲಾದ ವ್ಯಕ್ತಿಗಳನ್ನು ಯಾವುದೇ ವಿಚಾರಣೆ ಇಲ್ಲದೆ, ಕನಿಷ್ಠ ಆರು ತಿಂಗಳಿನಿಂದ ಗರಿಷ್ಠ ಎರಡು ವರ್ಷದವರೆಗೂ ಬಂಧಿಸಿಡಲು ಅವಕಾಶವಿದೆ. ಮಾರ್ಚ್ 10ರಂದು 50ನೇ ವಸಂತಕ್ಕೆ ಕಾಲಿರಿಸಿದ ಒಮರ್ ಸುಮಾರು 232 ದಿನಗಳನ್ನು ಹೊರ ಪ್ರಪಂಚದ ಸಂಪರ್ಕವಿಲ್ಲದೆ ಕಳೆದಿದ್ದಾರೆ.

ಯಾವಾಗಲೂ ಕ್ಲೀನ್ ಶೇವ್ ಮಾಡಿಕೊಂಡು ಜಂಟಲ್ಮನ್ ನಂತೆ ಇರುತ್ತಿದ್ದ ಒಮರ್ ಅಬ್ದುಲ್ಲಾ ಗಡ್ಡ ಬಿಟ್ಟು ಗುರುತೇ ಸಿಗದಂತೆ ಕಾಣುತ್ತಿದ್ದ ಚಿತ್ರವೊಂದು ಜನವರಿ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಒಮರ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆ ಆಗುವವರೆಗೂ ಗಡ್ಡ ತೆಗೆಯದಿರಲು ಒಮರ್ ನಿರ್ಧರಿಸಿದ್ದರು ಎಂಬ ಸುದ್ದಿಯಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications