ಗೃಹಬಂಧನ ಬಿಡುಗಡೆಯಾದ ಒಮರ್ಗೆ ಲಾಕ್ಡೌನ್ ಸ್ವಾಗತ
ಶ್ರೀನಗರ, ಮಾರ್ಚ್ 24: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಲು ಮುಂದಾಗಿದ್ದ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಮಾಜಿ ಸಿಎಂ ಒಮರ್ ಅಬ್ದುಲ್ಲಾರನ್ನು ಗೃಹಬಂಧನದಲ್ಲಿರಿಸಲಾಗಿತ್ತು. ಸುಮಾರು 8 ತಿಂಗಳ ಬಳಿಕ ಮಾರ್ಚ್ 24ರಂದು ಬಿಡುಗಡೆಗೊಂಡ ಒಮರ್ ಅವರಿಗೆ ಲಾಕ್ಡೌನ್ ಸ್ವಾಗತ ಸಿಕ್ಕಿದೆ. ದೇಶದೆಲ್ಲೆಡೆ ಕೊರೊನಾವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದೆ.
ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಫೆಬ್ರವರಿ 05ರಂದು ಬಂಧನಕ್ಕೊಳಗಾಗಿದ್ದ ಒಮರ್ ರನ್ನು ಬಿಡುಗಡೆ ಮಾಡಲಾಗಿದೆ. ಪಿಎಸ್ಎ ಕಾಯ್ದೆ ಪ್ರಕಾರ, ಇದರ ಅಡಿ ಬಂಧಿಸಲಾದ ವ್ಯಕ್ತಿಗಳನ್ನು ಯಾವುದೇ ವಿಚಾರಣೆ ಇಲ್ಲದೆ, ಕನಿಷ್ಠ ಆರು ತಿಂಗಳಿನಿಂದ ಗರಿಷ್ಠ ಎರಡು ವರ್ಷದವರೆಗೂ ಬಂಧಿಸಿಡಲು ಅವಕಾಶವಿದೆ. ಮಾರ್ಚ್ 10ರಂದು 50ನೇ ವಸಂತಕ್ಕೆ ಕಾಲಿರಿಸಿದ ಒಮರ್ ಸುಮಾರು 232 ದಿನಗಳನ್ನು ಹೊರ ಪ್ರಪಂಚದ ಸಂಪರ್ಕವಿಲ್ಲದೆ ಕಳೆದಿದ್ದಾರೆ.

ಯಾವಾಗಲೂ ಕ್ಲೀನ್ ಶೇವ್ ಮಾಡಿಕೊಂಡು ಜಂಟಲ್ಮನ್ ನಂತೆ ಇರುತ್ತಿದ್ದ ಒಮರ್ ಅಬ್ದುಲ್ಲಾ ಗಡ್ಡ ಬಿಟ್ಟು ಗುರುತೇ ಸಿಗದಂತೆ ಕಾಣುತ್ತಿದ್ದ ಚಿತ್ರವೊಂದು ಜನವರಿ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಒಮರ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆ ಆಗುವವರೆಗೂ ಗಡ್ಡ ತೆಗೆಯದಿರಲು ಒಮರ್ ನಿರ್ಧರಿಸಿದ್ದರು ಎಂಬ ಸುದ್ದಿಯಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications