ಬಿಳಿ ಬಾವುಟ ಪ್ರದರ್ಶಿಸಿ ತನ್ನ ಸೈನಿಕರ ಮೃತದೇಹ ಕೊಂಡೊಯ್ದ ಪಾಕಿಸ್ತಾನ
ಜಮ್ಮು ಮತ್ತು ಕಾಶ್ಮೀರ, ಸೆಪ್ಟೆಂಬರ್ 14: ಬಿಳಿ ಬಾವುಟ ಪ್ರದರ್ಶಿಸಿ ಪಾಕಿಸ್ತಾನ ತನ್ನ ಯೋಧರ ಮೃತದೇಹವನ್ನು ಕೊಂಡೊಯ್ದ ಘಟನೆ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ನಡೆದಿದೆ.
ಗಡಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಇಬ್ಬರು ಸೈನಿಕರು ಮೃತಪಟ್ಟಿದ್ದರು.
ಯೋಧರ ಮೃತದೇಹ ಕೊಂಡೊಯ್ಯಲು ಹಸರಸಾಹಸ ಮಾಡಿ ವಿಫಲವಾಗಿ ಬಳಿಕ, ಬಿಳಿ ಬಾವುಟ ಪ್ರದರ್ಶಿಸಿ ಮೃತದೇಹವನ್ನು ಕೊಂಡೊಯ್ದ ಘಟನೆ ಇದಾಗಿದೆ.

ಸೆ. 10 ಮತ್ತು 11 ರಂದು ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು. ಭಾರತೀಯ ಸೇನೆಯ ಪ್ರತಿದಾಳಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಹಾಜಿಪುರ ಸೆಕ್ಟರ್ನ ನಿವಾಸಿ ಸಿಪಾಯಿ ಗುಲಾಮ್ ರಸೂಲ್ ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭವಾಲ್ನಗರದ ನಿವಾಸಿ ಸಿಪಾಯಿ ರಸೂಲ್ ಮೃತಪಟ್ಟಿದ್ದರು.
ಜುಲೈ 30-31 ರಂದು ಕೀರನ್ ಸೆಕ್ಟರ್ನಲ್ಲಿ ಗಡಿ ದಾಟಲು ಪ್ರಯತ್ನಿಸಿದ್ದ 5-7 ಪಾಕ್ ಯೋಧರು ಮತ್ತು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಆದರೆ, ಇವರ ಮೃತದೇಹಗಳನ್ನು ಕೊಂಡೊಯ್ಯಲು ಪಾಕ್ ಸೇನೆ ಪ್ರಯತ್ನಿಸಿರಲಿಲ್ಲ. ಉಗ್ರರು ಕಾಶ್ಮೀರಿ ನಿವಾಸಿಗಳು ಹಾಗೂ ಯೋಧರು ನಾರ್ಥನ್ ಲೈಟ್ ಇನ್ಫೆಂಟ್ರಿ ಪಡೆಗೆ ಸೇರಿದವರಾಗಿರಬಹುದು.
ಹಾಗಾಗಿ ಇವರ ಮೃತದೇಹ ಕೊಂಡೊಯ್ಯಲಿಲ್ಲ. ಆದರೆ, ಈಗ ಮೃತಪಟ್ಟಿದ್ದ ಯೋಧ ಪಂಜಾಬಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದರಿಂದ ಮೃತದೇಹವನ್ನು ಕೊಂಡೊಯ್ದಿದ್ದಾರೆ. ಪಾಕಿಸ್ತಾನದಲ್ಲಿ ಪಂಜಾಬಿ ಮುಸ್ಲಿಮರು ಸೇನೆ, ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಮತ್ತು ಸಾಮಾಜಿಕವಾಗಿಯೂ ಉತ್ತಮ ಸ್ಥಿತಿ ಹೊಂದಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಭಾರತೀಯ ಸೇನಾ ನೆಲೆಗಳ ಮೇಲೆ 2 ದಿನಗಳ ಕಾಲ ನಿರಂತರವಾಗಿ ದಾಳಿ ನಡೆಸುವ ಮೂಲಕ ತಮ್ಮ ಯೋಧರ ಮೃತದೇಹವನ್ನು ಕೊಂಡೊಯ್ಯಲು ಪಾಕ್ ಸೇನೆ ಪ್ರಯತ್ನಿಸಿತ್ತು. ಆದರೆ, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications