ಜಮ್ಮು-ಕಾಶ್ಮೀರದ ಗಡಿಯಲ್ಲಿ ಮತ್ತೊಮ್ಮೆ ಬಾಲ ಬಿಚ್ಚಿದ ಪಾಕಿಸ್ತಾನ
ಶ್ರೀನಗರ್, ಜನವರಿ.10: ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕ ಯುದ್ಧದ ಆತಂಕ ಸೃಷ್ಟಿಯಾಗಿದೆ. ಇರಾನ್-ಅಮೆರಿಕಾ ನಡುವೆ ಯುದ್ಧದ ಕಾರ್ಮೋಡ ಕವಿಯುತ್ತಿದೆ. ವಿಶ್ವದ ರಾಷ್ಟ್ರಗಳೆಲ್ಲ ಎರಡು ದೇಶಗಳ ನಡುವೆ ಸಂಧಾನಕ್ಕೆ ಭಾರತವೇ ಮಧ್ಯಪ್ರವೇಶಿಸಬೇಕು ಎಂದು ಹೇಳುತ್ತಿವೆ.
ಭಾರತವನ್ನು ದೊಡ್ಡ ದೊಡ್ಡ ರಾಷ್ಟ್ರಗಳ ನಾಯಕರೇ ಹಾಡಿ ಹೊಗಳುತ್ತಿದ್ದರೆ ಪಾಕಿಸ್ತಾನದ ಎದೆಯಲ್ಲಿ ಉರಿ ಹೊತ್ತಿಕೊಂಡಂತೆ ಕಾಣುತ್ತಿದೆ. ಇಷ್ಟುದಿನ ಬಾಲ ಮುದುರಿಕೊಂಡಿದ್ದ ನೆರೆಯ ರಾಷ್ಟ್ರ ಇದೀಗ ಮತ್ತೊಮ್ಮೆ ಬಾಲ ಬಿಚ್ಚಿದೆ.
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದು, ಅಪ್ರಚೋದಿತ ಮೋಟಾರ್ ಬಾಂಬ್ ದಾಳಿಯಲ್ಲಿ ಭಾರತದ ಇಬ್ಬರು ಸೇನಾ ಗಡಿ ಪಾಲಕರು ಹುತಾತ್ಮರಾಗಿದ್ದಾರೆ. ಮೂವರು ಸೇನಾ ಪಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಣಿವೆ ಗಡಿಯಲ್ಲಿ ಮೋಟಾರ್ ಬಾಂಬ್ ದಾಳಿ:
ಜಮ್ಮು-ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿಭಾಗದಲ್ಲಿ ಪಾಕಿಸ್ತಾನ ಸೇನಾ ಪಡೆಯು, ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಮೋಟಾರ್ ಬಾಂಬ್ ದಾಳಿಯನ್ನು ನಡೆಸಿದೆ. ಅಲ್ಲದೇ ಪಾಕ್ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುಲ್ಪುರ್ ಸೆಕ್ಟರ್ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಗಡಿ ಪಾಲಕರ ಮೇಲೆ ದಾಳಿ ನಡೆಸಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಹುತಾತ್ಮರಾಗಿದ್ದರೆ, ಗಂಭೀರವಾಗಿ ಗಾಯಗೊಂಡ ಮೂವರು ಗಡಿ ಪಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications