ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಪಾಕ್ ಉಗ್ರ ಹಾಗೂ ಎಲ್‌ಇಟಿ ಕಮಾಂಡರ್ ಹತ್ಯೆ

|
Google Oneindia Kannada News

ಶ್ರೀನಗರ, ಜೂನ್ 29: ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಉಗ್ರ ಹಾಗೂ ಎಲ್‌ಇಟಿ ಕಮಾಂಡರ್ ಅಬ್ರಾರ್ ಎಂಬಾತನನ್ನು ಗುಂಡಿಕ್ಕಿ ಕೊಂದಿರುವುದಾಗಿ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

"ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು. ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್‌ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿದೆ. ತಕ್ಷಣವೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದರು.

ಜಮ್ಮು ಐಎಎಫ್ ಕೇಂದ್ರಕ್ಕೆ ನುಗ್ಗಿದ ಉಗ್ರರ ಡ್ರೋನ್: ತಪ್ಪು ಆಗಿದ್ದು ಎಲ್ಲಿ?ಜಮ್ಮು ಐಎಎಫ್ ಕೇಂದ್ರಕ್ಕೆ ನುಗ್ಗಿದ ಉಗ್ರರ ಡ್ರೋನ್: ತಪ್ಪು ಆಗಿದ್ದು ಎಲ್ಲಿ?

ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

 Pakistani Terrorist Top LeT Commander killed In Encounter At Srinagar

ಈ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್‌ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಭಾನುವಾರ ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಪ್ರಕರಣ ನಡೆದ ನಂತರ ಜಮ್ಮು ಕಾಶ್ಮೀರ ಹೈ ಅಲರ್ಟ್‌ನಲ್ಲಿದೆ. ಉಗ್ರರ ಪತ್ತೆಗೆ ಹಲವು ಕಡೆಗಳಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ.

English summary
Pakistani terrorist and top LeT commander killed in encounter with security forces in J-K's Srinagar informed IGP Vijay kumar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X