ಉಗ್ರರಿಗೆ ಸಹಾಯ ಆರೋಪ; ದೇವಿಂದರ್ ಸಿಂಗ್ಗೆ ಜಾಮೀನು
ನವದೆಹಲಿ, ಜೂನ್ 19 : ಉಗ್ರರಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಎನ್ಐಎ ಮತ್ತು ದೆಹಲಿ ಪೊಲೀಸರು ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.
Recommended Video
ಶುಕ್ರವಾರ ದೆಹಲಿಯ ನ್ಯಾಯಾಲಯ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ಗೆ ಜಾಮೀನು ಮಂಜೂರು ಮಾಡಿದೆ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಸೂಕ್ತ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರು ವಿಫಲವಾದ ಕಾರಣ ಜಾಮೀನು ನೀಡಲಾಗಿದೆ.
ಹಿಜ್ಬುಲ್ ಉಗ್ರರ ಜೊತೆ ದೇವಿಂದರ್ ನಂಟು; ಎನ್ಐಗೆ ಸಿಕ್ತು ಸಾಕ್ಷಿ
ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ಸಹಾಯ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಉಗ್ರರ ಜೊತೆ ಕಾರಿನಲ್ಲಿ ತೆರಳುವಾಗಲೇ ಅವರನ್ನು ಪೊಲೀಸರು ಬಂಧಿಸಿದ್ದರು.
ಉಗ್ರರಿಗೆ ಸಹಾಯ; ದೇವಿಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ
12 ಲಕ್ಷ ಹಣ ಪಡೆದು ಉಗ್ರರಿಗೆ ಸಹಾಯ ಮಾಡಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸ್ತವ್ಯ ಹೂಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದು ಆರೋಪ. ದೇವಿಂದರ್ ಸಿಂಗ್ ಬಂಧನವಾಗುತ್ತಿದ್ದಂತೆ ಅವರನ್ನು ಅಮಾನತು ಮಾಡಲಾಗಿತ್ತು.
ದೇವಿಂದರ್ ಸಿಂಗ್ ಬಳಿ ಜಪ್ತಿಯಾಗಿದ್ದು ಟೂತ್ ಬ್ರಷ್, ಅತ್ತರ್, ಎಕೆ47..
ದೇವಿಂದರ್ ಸಿಂಗ್ ವಿಚಾರಣೆಗೆ ಎನ್ಐಎ ಸಹ ಕೈ ಜೋಡಿಸಿದೆ. ಶ್ರೀನಗರದಲ್ಲಿರು ಅವರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿತ್ತು. ಉಗ್ರರನ್ನು ಶರಣಾಗತರಾಗಿ ಮಾಡಿಸಲು ಕರೆದುಕೊಂಡು ಹೋಗುತ್ತಿದ್ದೆ ಎಂದು ದೇವಿಂದರ್ ಸಿಂಗ್ ಹೇಳಿದ್ದರು.