ಶ್ರೀನಗರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ, ನವೆಂಬರ್ 08: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಎಂಬವರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಬಟ್ಮಾಲೂ ಪ್ರದೇಶದಲ್ಲಿ ಉಗ್ರರು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ವರದಿಯು ತಿಳಿಸಿದೆ. ಈ ಬಗ್ಗೆ ಪಿಟಿಐ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯನ್ನು ಉಲ್ಲೇಖ ಮಾಡಿದೆ
"ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಗರದ ಬಟ್ಮಾಲೂ ಪ್ರದೇಶದ ಎಸ್ಡಿ ಕಾಲೋನಿಯಲ್ಲಿರುವ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ನಿವಾಸದ ಸಮೀಪದಲ್ಲಿ ಈ ಉಗ್ರರು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ," ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
"ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ತೌಸಿಫ್ ಅಹ್ಮದ್ರನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರು ಪೊಲೀಸ್ ಸಿಬ್ಬಂದಿ ತೌಸಿಫ್ ಅಹ್ಮದ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಕೂಡಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಈ ಪ್ರದೇಶದಲ್ಲಿ ಪೊಲೀಸರು ಸುತ್ತುವರಿದಿದ್ದು, ಭಯೋತ್ಪಾದಕರ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ವಶಕ್ಕೆ ಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯು ಮತ್ತಷ್ಟು ಅಧಿಕವಾಗಿದೆ. ಭದ್ರತಾ ಸಿಬ್ಬಂದಿಗಳು, ನಾಗರಿಕರ ಹತ್ಯೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿದ ಉಗ್ರರ ದಾಳಿ
ಅಕ್ಟೋಬರ್ ತಿಂಗಳು ಒಂದರಲ್ಲೇ 12 ಭದ್ರತಾ ಸಿಬ್ಬಂದಿಗಳು, 20 ಉಗ್ರರು ಹಾಗೂ 12 ನಾಗರಿಕರು ಹತ್ಯೆಗೀಡಾಗಿದ್ದಾರೆ. ಸೆಪ್ಟೆಂಬರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು, 8 ಮಂದಿ ಉಗ್ರರು, ಓರ್ವ ನಾಗರಿರು ಸಾವನ್ನಪ್ಪಿದ್ದರು.
ತಾಲಿಬಾನ್ ಉಗ್ರರು ಆಗಸ್ಟ್ 15 ರಂದು ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕೃತ ಅಂಕಿ ಅಂಶಗಳ ಪ್ರಕಾರವಾಗಿ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದ ಆಗಸ್ಟ್ 15 ರಿಂದ ಅಕ್ಟೋಬರ್ ತಿಂಗಳ ಕೊನೆಯವರೆಗೆ ಜಮ್ಮು-ಕಾಶ್ಮೀರದಲ್ಲಿ 16 ಭದ್ರತಾ ಸಿಬ್ಬಂದಿಗಳು, 15 ಪ್ರಜೆಗಳು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಇನ್ನು ಈ ಸಂದರ್ಭದಲ್ಲೇ 39 ಉಗ್ರ ಸಂಘಟನೆಗಳ ಕಮಾಂಡರ್ಗಳನ್ನೂ, ಉಗ್ರರನ್ನೂ ಭಾರತೀಯ ಸೇನಾ ಪಡೆಯು ಹೊಡೆದುರುಳಿಸಿದೆ.
ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರಂತರವಾಗಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸುತ್ತಲಿದ್ದಾರೆ. ಇತ್ತೀಚೆಗೆ ಜಮ್ಮು ಕಾಶ್ಮೀರ ರಜೌರಿ ಜಿಲ್ಲೆಯ ಖಬ್ಲಾನ್ ಅರಣ್ಯದಲ್ಲಿ ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಉಗ್ರರು ಅಡಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಬೆನ್ನಲ್ಲೇ ಭಾರತೀಯ ಸೇನೆ ಅಲರ್ಟ್ ಆಗಿ ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಪಿರ್ಪಾಂಜಲ್ ಪ್ರದೇಶಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಕಳೆದ 27 ದಿನಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಒಂಬತ್ತು ಯೋಧರು ಹುತಾತ್ಮರಾಗಿದ್ದಾರೆ.
ಇನ್ನು ಕಳೆದ ಅಕ್ಟೋಬರ್ನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖವಾಗಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿಯನ್ನು ನಡೆಸುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ತಮ್ಮ ತವರೂರಿನತ್ತ ಮುಖಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications