ದೇವಾಲಯದ ಮೇಲೆ ನಡೆಯಬೇಕಿದ್ದ ಉಗ್ರರ ದಾಳಿ ತಡೆದ ಭದ್ರತಾ ಪಡೆ
ಪೂಂಚ್, ಡಿಸೆಂಬರ್ 27: ಜಮ್ಮು ಮತ್ತು ಕಾಶ್ಮೀರದಲ್ಲಿವ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ.
ಎಸ್ಎಸ್ ಪಿ ರಮೇಶ್ ಕುಮಾರ್ ಅಂಗ್ರಾಲ್ ಈ ಬಗ್ಗೆ ಮಾಹಿತಿ ನೀಡಿದ್ದು ವಿಶೇಷ ಕಾರ್ಯಪಡೆ ತಂಡ 49 ರಾಷ್ಟ್ರೀಯ ರೈಫಲ್ಸ್ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಮುಸ್ತಾಫಾ ಇಕ್ಬಾಲ್ ಹಾಗೂ ಮುರ್ತಾಜಾ ಇಕ್ಬಾಲ್ ಎಂಬುವವರನ್ನು ಬಂಧಿಸಿದ್ದು, ಮುಸ್ತಾಫಾನಿಗೆ ಪಾಕಿಸ್ತಾನದಿಂದ ಕರೆ ಬಂದಿತ್ತು ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಬಂಧಿಸಲಾಗಿದ್ದು, ಆರು ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಅವರಿಗೆ ಅರಿ ಗ್ರಾಮದಲ್ಲಿರುವ ದೇವಾಲಯದ ಮೇಲೆ ಬಾಂಬ್ ದಾಳಿ ನಡೆಸುವ ಟಾರ್ಗೆಟ್ ನೀಡಲಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದು ಗ್ರೆನೇಡ್ ನ್ನು ಹೇಗೆ ಬಳಕೆ ಮಾಡಬೇಕೆಂಬುದರ ಬಗ್ಗೆ ಮಾಹಿತಿಯನ್ನೊಳಗೊಂಡ ವಿಡಿಯೋವನ್ನೂ ಫೋನ್ ಗೆ ಕಳಿಸಲಾಗಿತ್ತು ಎಂಬ ಮಾಹಿತಿ ಬಹಿರಂಗಪಡಿಸಿದ್ದಾರೆ. ಆರೋಪಿಗಳ ಹೇಳಿಕೆಯ ಆಧಾರದಲ್ಲಿ ನಡೆಸಿದ ತಪಾಸಣೆ ನಡೆಸಿದಾಗ 6 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಇಂದು ಜಾರ್ಖಂಡ್ನ ಗುಮ್ಲಾ ಜಿಲ್ಲೆಯಲ್ಲಿ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಐವರು ನಕ್ಸಲರು ತೃತೀಯ ಪ್ರಸ್ತುತಿ ಸಮಿತಿಗೆ ಸೇರಿದವರಾಗಿದ್ದಾರೆ. ಬಂಧಿತರಿಂದ ಜೀವಂತ ಗುಂಡುಗಳು, ರೈಫಲ್ ಹಾಗೂ ಪಿಸ್ತೂಲುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗುಮ್ಲಾ ಎಸ್'ಪಿ ಜನಾರ್ಧನನ್ ಅವರು ಹೇಳಿದ್ದಾರೆ.
ಬಂಧಿತ ಉಗ್ರರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿಗಳು ಬಂದಿವೆ. ಕಾರ್ಯಾಚರಣೆ ವೇಳೆ ಮತ್ತಷ್ಟು ನಕ್ಸಲರು ತಪ್ಪಿಸಿಕೊಂಡಿದ್ದಾರೆಂಬ ಮಾಹಿತಿಗಳಿವೆ ಎಂದಿದ್ದಾರೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications