ಜಮ್ಮು ಮತ್ತು ಕಾಶ್ಮೀರಕ್ಕೆ ಶುಕ್ರವಾರ ರಾಜನಾಥ್ ಸಿಂಗ್ ಭೇಟಿ
ಶ್ರೀನಗರ, ಫೆಬ್ರವರಿ 14 : ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಕೇಂದ್ರ ಗೃಹ ಇಲಾಖೆ ಕ್ಷಣ-ಕ್ಷಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಪುಲ್ವಾಮ ಉಗ್ರರ ದಾಳಿಯಲ್ಲಿ ಆರ್ಡಿಎಕ್ಸ್ ಬಳಕೆ?
ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಕಟ್ಟಡ ರಿಪೇರಿ ಕೆಲ್ಸದಿಂದ ಆತ್ಮಾಹುತಿ ದಾಳಿಕೋರನಾದ ಉಗ್ರ ಆದಿಲ್ ಅಹ್ಮದ್
ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರ ಜೊತೆ ದೂರವಾಣಿ ಮೂಲಕ ರಾಜನಾಥ್ ಸಿಂಗ್ ಮಾತುಕತೆ ನಡೆಸಿದ್ದಾರೆ. ಉಗ್ರರ ದಾಳಿ ಬಳಿಕ ರಾಜ್ಯದಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಶುಕ್ರವಾರ ಬಿಹಾರಕ್ಕೆ ರಾಜನಾಥ್ ಸಿಂಗ್ ಅವರ ಭೇಟಿ ನೀಡಬೇಕಿತ್ತು. ಆದರೆ, ಎಲ್ಲಾ ಕಾರ್ಯಕ್ರಮಗಳನ್ನು ಅವರು ರದ್ದುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಅವರು ಭೇಟಿ ನೀಡುವ ಸಾಧ್ಯತೆ ಇದೆ.
ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಯೋಧರ ಹೆಸರುಗಳು
ರಾಜನಾಥ್ ಸಿಂಗ್ ಅವರು ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗುಬ ಮತ್ತು ಸಿಆರ್ಪಿಎಫ್ ಡೈರೆಕ್ಟರ್ ಜನರಲ್ ಭಟ್ನಾಗರ್ ಅವರ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಗೃಹ ಇಲಾಖೆ ದಾಳಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಸಂಗ್ರಹಿಸುತ್ತಿದೆ.
सीआरपीएफ @crpfindia, देश का एक बहादुर और अग्रणी सुरक्षा बल है। देश की सुरक्षा और सम्प्रभुता की रक्षा के लिए इस बल ने समय-समय पर बहुत कुर्बानियाँ दी हैं । जम्मू और कश्मीर में शान्ति और व्यवस्था कायम रखने में इस बल का अहम योगदान है ।
— Rajnath Singh (@rajnathsingh) February 14, 2019