19 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ದಾಳಿ
ಶ್ರೀನಗರ, ಫೆಬ್ರವರಿ 15 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ದಾಳಿ ರಾಜ್ಯದಲ್ಲಿ 19 ವರ್ಷಗಳ ಬಳಿಕ ನಡೆದ ದೊಡ್ಡ ಉಗ್ರರ ದಾಳಿಯಾಗಿದೆ. ಗುರುವಾರ ಮಧ್ಯಾಹ್ನ ನಡೆದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದಾರೆ.
ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದಾರೆ. ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸೇನಾ ವಾಹನಕ್ಕೆ ಸ್ಫೋಟಕಗಳನ್ನು ತುಂಬಿಸಿದ್ದ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ.

2001ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಆ ದಾಳಿಯಲ್ಲಿ 38 ಜನರು ಮೃತಪಟ್ಟಿದ್ದರು. ಪುಲ್ವಾಮದಲ್ಲಿ ಸೇನಾ ಯೋಧರ ವಾಹನ ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದಾರೆ.
2001ರ ಅಕ್ಟೋಬರ್ 1ರಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿತ್ತು. ರಾಜ್ಯದ ವಿಧಾನಸಭೆ ಕಟ್ಟಡಕ್ಕೆ ಸ್ಫೋಟಕ ತುಂಬಿದ ಟಾಟಾ ಸುಮೋವನ್ನು ನುಗ್ಗಿಸಲಾಗಿತ್ತು.
ವಿಧಾನಸಭೆಯ ಮುಖ್ಯ ಗೇಟ್ ಮೂಲಕ ಟಾಟಾ ಸುಮೋವನ್ನು ನುಗ್ಗಿಸಿ ನಡೆಸಿದ ದಾಳಿಯಲ್ಲಿ 38 ಜನರು ಮೃತಪಟ್ಟಿದ್ದರು. ವಾಹನ ನುಗ್ಗುತ್ತಿದ್ದಂತೆ ನಡೆದ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಕೊಂದು ಹಾಕಲಾಗಿತ್ತು.
2019ರ ಫೆ.14ರಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಇದೇ ಮಾದರಿಯ ದಾಳಿಯನ್ನು ನಡೆಸಿದೆ. ಸ್ಫೋಟಕ ತುಂಬಿದ್ದ ಸ್ಕಾರ್ಫಿಯೋ ಕಾರನ್ನು ಸೇನಾ ವಾಹನಕ್ಕೆ ಗುದ್ದಲಾಗಿದೆ. ಆದಿಲ್ ಅಹ್ಮದ್ ದಾರ್ ಆತ್ಮಾಹುತಿ ಉಗ್ರನ ಮೂಲಕ ಈ ದಾಳಿಯನ್ನು ನಡೆಸಲಾಗಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications