ವಿಡಿಯೋ: ಅತ್ಮಾಹುತಿ ದಾಳಿಗೂ ಮುನ್ನ ಜೈಷ್ ಉಗ್ರ ಆದಿಲ್ ಹೇಳಿದ್ದೇನು?
ಶ್ರೀನಗರ, ಫೆಬ್ರವರಿ 14: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ(ಫೆಬ್ರವರಿ 14)ದಂದು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ದಾಳಿಕೋರ ಆದಿಲ್ ಆಹ್ಮದ್ ದರ್ ದಾಳಿ ಮಾಡಿ ಸಾಯುವುದಕ್ಕೂ ಮುನ್ನ ವಿಡಿಯೋ ಸಂದೇಶ ನೀಡಿದ್ದಾನೆ.
ಉಗ್ರರ ದಾಳಿಯಲ್ಲಿ ಸುಮಾರು 30ಕ್ಕೂ ಅಧಿಕ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. 45ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪುಲ್ವಾಮಾದಲ್ಲಿ ಭಯೋತ್ಪಾದನಾ ದಾಳಿಯಾದ ಬಳಿಕ ಜೈಷ್ ಸಂಘಟನೆ ವಿಡಿಯೋ ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಕಕ್ಪೋರಾದ ಗಂಡಿಬಾಗ್ ನ ಆದಿಲ್ ಅಹ್ಮದ್ ದರ್ ಅಲಿಯಾಸ್ ವಖಾಸ್ ಕಮ್ಯಾಂಡೋ ಕಾಣಿಸಿಕೊಂಡಿದಾನೆ.
ಆದಿಲ್ ಹಿಂಬದಿಯಲ್ಲಿ ಜೈಷ್ ಎ ಮೊಹಮ್ಮದ್ ಬ್ಯಾನರ್ ಇದ್ದು, ರೈಫಲ್ಸ್ ಗಳನ್ನು ಹಿಡಿದುಕೊಂಡು ಮಾತನಾಡಿರುವ ಆದಿಲ್, ಕಳೆದ ವರ್ಷ ನಿಷೇಧಿತ ಉಗ್ರ ಸಂಘಟನೆಯನ್ನು ಸೇರಿಕೊಂಡೆ, ಈ ವರ್ಷ ಮಾರಣಾಂತಿಕ ದಾಳಿ ನಡೆಸುವ ಹೊಣೆ ಸಿಕ್ಕಿದೆ. ಈ ವಿಡಿಯೋ ಪ್ರಸಾರವಾಗುವ ವೇಳೆಗೆ ನಾನು ಜನ್ನತ್(ಸ್ವರ್ಗ)ದಲ್ಲಿರುತ್ತೇನೆ ಎಂದಿದ್ದಾನೆ.
The coward who struck at Pulwama pic.twitter.com/4SRSQQUarB
— Vicky Nanjappa (@vickynanjappa) February 14, 2019

ಜಮ್ಮು ಮತ್ತು ಕಾಶ್ಮೀರ ಹೆದ್ದಾರಿಯಲ್ಲಿ ಎಲ್ ಇ ಡಿ ಸ್ಫೋಟಕ್ಕಾಗಿ ಜೈಷ್ ಸಿದ್ಧತೆ ನಡೆಸಿತ್ತು. 50ಕ್ಕೂ ಅಧಿಕ ಸಿ ಆರ್ ಪಿಎಫ್ ವಾಹನಗಳನ್ನು ಗುರಿಯನ್ನಾಗಿಸಿ ಈ ಕೃತ್ಯ ಎಸಗಲಾಗಿದೆ. ಪ್ರತಿ ವಾಹನದಲ್ಲೂ 40 ರಿಂದ 45 ಸೈನಿಕರಿದ್ದರು.
2016ರ ಸೆಪ್ಟೆಂಬರ್ ನಲ್ಲಿ ಉರಿ ಪ್ರದೇಶದಲ್ಲಿ 23 ಸೈನಿಕರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಮೋದಿ ಸರ್ಕಾರವು ಸರ್ಜಿಕಲ್ ಸ್ಟ್ರೈಕ್ ನಡೆಸಿ ಪಾಕಿಸ್ತಾನ ಸೇನಾ ಕ್ಯಾಂಪ್ ಗಳನ್ನು ಧ್ವಂಸಗೊಳಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications