ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಪುಲ್ವಾಮಾ ಘಟನೆ ನೆನೆದು ಭಾವುಕರಾಗಿ ಅತ್ತ ಯೋಗಿ ಆದಿತ್ಯನಾಥ್

|
Google Oneindia Kannada News

ಜಮ್ಮು, ಫೆಬ್ರವರಿ 23: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾವುಕರಾಗಿ ಅತ್ತ ಘಟನೆ ಶುಕ್ರವಾರ ನಡೆದಿದೆ.

ಯಾಸಿನ್ ಮಲಿಕ್ ಬಂಧನ: ಕಾಶ್ಮೀರಕ್ಕೆ 100 ಅರೆಸೇನಾ ತುಕಡಿ ರವಾನೆ ಯಾಸಿನ್ ಮಲಿಕ್ ಬಂಧನ: ಕಾಶ್ಮೀರಕ್ಕೆ 100 ಅರೆಸೇನಾ ತುಕಡಿ ರವಾನೆ

ಭಯೋತ್ಪಾದನೆಯ ದಮನಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂದು ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಭಾವುಕರಾದರು.

ಅವರು ಭಾವುಕರಾಗಿ ಅಳುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು, "ನರೇಂದ್ರ ಮೋದಿ ಅವರ ಸರ್ಕಾರ ಭಯೋತ್ಪಾದನೆಯ ದಮನಕ್ಕೆ ಸಾಧ್ಯವಿರುವ ಎಲ್ಲಾ ಕಾರ್ಯಗಳನ್ನೂ ಮಾಡುತ್ತಿದೆ. ಕಾಶ್ಮೀರದಲ್ಲಿ ಏನಾಗುತ್ತಿದೆ ಗೊತ್ತೆ? ಆರುವ ಸಮಯದಲ್ಲಿ ದೀಪ ಜೋರಾಗಿ ಉರಿದಂತೆ, ಅಲ್ಲೂ ಉಗ್ರರು ಸಾಯುವ ಮುನ್ನ ಉರಿಯುತ್ತಿದ್ದಾರೆ. ಭಯೋತ್ಪಾದನೆ ಸದ್ಯವೇ ಕೊನೆಯಾಗಲಿದೆ. ನರೇಂದ್ರ ಮೋದಿ ಸರ್ಕಾರ ಅದಕ್ಕೆ ಕಂಕಣಬದ್ಧವಾಗಿದೆ" ಎಂದರು.

ಪುಲ್ವಾಮಾ ದಾಳಿಗೂ ಮೊದಲು ಹುತಾತ್ಮ ಯೋಧ ಪತ್ನಿಗೆ ಕಳಿಸಿದ ಕಟ್ಟಕಡೆಯ ವಿಡಿಯೋ!ಪುಲ್ವಾಮಾ ದಾಳಿಗೂ ಮೊದಲು ಹುತಾತ್ಮ ಯೋಧ ಪತ್ನಿಗೆ ಕಳಿಸಿದ ಕಟ್ಟಕಡೆಯ ವಿಡಿಯೋ!

Pulwama terror attack: Yogi Adityanath gets emotional

ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 44 ಯೋಧರು ಹುತಾತ್ಮರಾದರು. ಈ ದಾಳಿಯನ್ನು ತಾನೇ ನಡೆಸಿದ್ದಾಗಿ ಜೈಷ್ ಇ ಮೊಹಮ್ಮದ್ ಉಗ್ರದಂಘಟನೆ ಹೇಳಿಕೊಂಡಿತ್ತು.

English summary
Uttar Pradesh Chief Minister Yogi Adityanath became emotional on Friday when he was asked about the Pulwama terror attack in which over 40 Central Reserve Police Force (CRPF) soldiers laid down their lives. Video becomes viral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X