ಕೊನೆಗೂ ಕತ್ತಲೆಯಿಂದ ಬೆಳಕಿನೆಡೆಗೆ ಜಮ್ಮು- ಕಾಶ್ಮೀರದ ಈ ಗ್ರಾಮ
ರಜೌರಿ, ಅಕ್ಟೋಬರ್ 5: ಸ್ವಾತಂತ್ರ್ಯ ಬಂದರೂ ಕತ್ತಲೆಯಲ್ಲೇ ಇದ್ದ ಜಮ್ಮು-ಕಾಶ್ಮೀರದ ಈ ಗ್ರಾಮ ಅಂತೂ ಬೆಳಕು ಕಂಡಿದೆ.
ಸೌಭಾಗ್ಯ ವಿದ್ಯುದೀಕರಣ ಯೋಜನೆಯಡಿ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮ ಒಂದು ಇದೇ ಮೊದಲ ಬಾರಿಗೆ ವಿದ್ಯುತ್ ಸೌಕರ್ಯ ಪಡೆದುಕೊಂಡಿದೆ.
ಗಡಿ ಹತ್ತಿರ ಇರುವ ಪ್ರದೇಶವಾಗಿದ್ದರೂ ಕೂಡ ಇದುವರೆಗೆ ವಿದ್ಯುತ್ ಸೌಲಭ್ಯವಿರಲಿಲ್ಲ, ಈ ಗ್ರಾಮದ ಒಟ್ಟು 20 ಸಾವಿರ ಮನೆಗಳಿಗೆ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ.

ಕೇಂದ್ರ ಸರ್ಕಾರ ಸೌಭ್ಯಾಗ್ಯ ಯೋಜನೆಯಡಿ 20 ಸಾವಿರದ 300 ಮನೆಗಳಿಗೆ ವಿದ್ಯುತ್ ಸೌಕರ್ಯ ಕಲ್ಪಿಸಿದೆ ಎಂದು ರಜೌರಿ ಡಿಡಿಸಿ ಮೊಹಮ್ಮದ್ ಐಜಾಜ್ ಅಸಾದ್ ಹೇಳಿದ್ದಾರೆ.
ಎಲ್ ಒಸಿ ಸಮೀಪವಿರುವ ಅನೇಕ ಗ್ರಾಮಗಳಲ್ಲಿ 1947ರಿಂದಲೂ ವಿದ್ಯುತ್ ಸೌಲಭ್ಯ ಇಲ್ಲದಂತಾಗಿತ್ತು. ಈಗ ವಿದ್ಯುತ್ ಸೌಕರ್ಯ ದೊರೆತಿರುವುದರಿಂದ ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗಿದೆ.
ಈ ಹಿಂದೆ ವಿದ್ಯುತ್ ಇಲ್ಲದೆ ಕ್ಯಾಂಡಲ್ ಹಾಗೂ ಸೀಮೆಎಣ್ಣೆಯ ದೀಪದ ಬೆಳಕಿನಲ್ಲಿ ವಿದ್ಯಾಭ್ಯಾಸ ಮಾಡಬೇಕಾಗಿತ್ತು ಎಂದು ಖಂಡರಿಯಾದ ಗ್ರಾಮಸ್ಥ ಖದಿಮ್ ಹುಸೈನ್ ಸಂತಸ ವ್ಯಕ್ತಪಡಿಸಿದ್ದಾರೆ.
ಸೆಪ್ಟೆಂಬರ್ 25, 2017ರಂದು ಸೌಭಾಗ್ಯ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯ ನೀಡಲಾಗುತ್ತದೆ.
ವಿದ್ಯುತ್ ಸೌಕರ್ಯದಿಂದ ವ್ಯಾಪಾರ ಚಟುವಟಿಕೆ ಬೆಳವಣಿಗೆಯಾಗಲಿದೆ. ಹೊಸ ಅಂಗಡಿಗಳನ್ನು ತೆರೆಯಬಹುದಾಗಿದೆ. ಈ ಪ್ರದೇಶದಲ್ಲಿ ಎರಡ್ಮೂರು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು, ಮನೆಯಲ್ಲಿಯೇ ಮೊಬೈಲ್ ಪೋನ್ ಗಳ ಚಾರ್ಜಿಂಗ್ ಮಾಡಿಕೊಳ್ಳಲು ಅನುಕೂಲವಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications