370 ನೇ ವಿಧಿ ರದ್ದು: ಸರ್ಕಾರದ್ದು ದಿಟ್ಟ ಹೆಜ್ಜೆ ಎಂದ ಆರೆಸ್ಸೆಸ್

ಶ್ರೀನಗರ, ಆಗಸ್ಟ್ 05: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಡೆಯನ್ನು ದಿಟ್ಟ ಹೆಜ್ಜೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಣ್ಣಿಸಿದೆ.

"ಇದು ಜಮ್ಮು ಮತ್ತು ಕಾಶ್ಮೀರದ ಜನರ ಹಿತಾಸಕ್ತಿ ಮತ್ತು ಇಡೀ ದೇಶದ ಒಳಿತಿನ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ಸ್ವಾರ್ಥ ಉದ್ದೇಶ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗಿಟ್ಟು ಎಲ್ಲರೂ ಈ ನಡೆಯನ್ನು ಬೆಂಬಲಿಸಬೇಕಿದೆ" ಎಂದು ಆರೆಸ್ಸೆಸ್ ಹೇಳಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ಈ ಮಸೂದೆಯನ್ನು ಗೃಹಸಚಿವ ಅಮಿತ್ ಶಾ ಮಂಡಿಸಿದರು. ಇದಕ್ಕೆ ರಾಷ್ಟ್ರಪತಿಗಳ ಅಂಕಿತವೂ ದೊರಕಿದ್ದು, ಸಾಕಷ್ಟು ಪರವಿರೋಧದ ಚರ್ಚೆ ಎದ್ದಿದೆ.

RSS Calls Resolution Revoking Article 370 From JK Is A Courageous Step

ಕೇಂದ್ರ ಸರ್ಕಾರದ ನಡೆಯನ್ನು ಅಚ್ಚರಿಯ ರೀತಿಯಲ್ಲಿ ಕೆಲವು ವಿಪಕ್ಷ ನಾಯಕರೇ ಬೆಂಬಲಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅವರವಿಂದ್ ಕೇಜ್ರಿವಾಲ್, ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಬಿಜೆಡಿ ನಾಯಕರು ಈ ನಡೆಯನ್ನು ಬೆಂಬಲಿಸಿದ್ದು ಈ ನಿರ್ಧಾರದಲ್ಲಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+