ಉಗ್ರರಿಗೆ ಹಣ: ಕಾಶ್ಮೀರದಲ್ಲಿ ಎನ್ ಜಿಓ ಸಂಸ್ಥೆಗಳ ಮೇಲೆ ಎನ್ಐಎ ದಾಳಿ
ಶ್ರೀನಗರ್, ಅಕ್ಟೋಬರ್.29: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗೆಳನ್ನು ನಡೆಸುವುದಕ್ಕೆ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಸರ್ಕಾರೇತರ ಸಂಸ್ಥೆಗಳು ಮತ್ತು ಟ್ರಸ್ಟ್ ಗಳ ಮೇಲೆ ರಾಷ್ಟ್ರೀಯ ತನಿಖಾ ತಂಡವು ಎರಡನೇ ದಿನವೂ ದಾಳಿ ಮುಂದುವರಿಸಿದೆ.
ಗುರುವಾರ ಶ್ರೀನಗರದ 9 ಮತ್ತು ನವದೆಹಲಿ 6 ಕಡೆಗಳಲ್ಲಿ ಸರ್ಕಾರೇತರ ಸಂಸ್ಥೆಗಳು ಮತ್ತು ಟ್ರಸ್ಟ್ ಗಳ ಮೇಲೆ ಎನ್ಐಎ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ನವದೆಹಲಿ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಜಾಫರ್ ಉಲ್ ಇಸ್ಲಾಂ ಖಾನ್ ಮನೆ ಮೇಲೂ ದಾಳಿ ನಡೆಸಲಾಗಿದೆ.
ಬುಧವಾರವಷ್ಟೇ ಶ್ರೀನಗರ ಮತ್ತು ಬಂಡಿಪೋರಾದ 10 ಕಡೆ ಹಾಗೂ ಬೆಂಗಳೂರಿನ ಒಂದ ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. 2000ರಲ್ಲೇ ಸ್ಥಾಪಿಸಲಾದ ಕನಿಷ್ಠ ಮೂರು ಸರ್ಕಾರೇತರ ಸಂಸ್ಥೆಗಳ ಮೇಲೆಯೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.

ವಿದೇಶದ ಹಣ ಭಯೋತ್ಪಾದನೆಗೆ ವಿನಿಯೋಗ:
ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಾರ, ಧಾರ್ಮಿಕ ಕಾರ್ಯಗಳು ಮತ್ತು ಇತರ ಸಾಮಾಜಿಕ ಕಾರ್ಯಗಳ ಹೆಸರಿನಲ್ಲಿ ವಿದೇಶಗಳಿಂದ ಹಣವನ್ನು ಸಂಗ್ರಹಿಸಿ ಭಯೋತ್ಪಾದಕ ಚಟುವಟಿಕೆಗಳಿಗೆ ಅದನ್ನು ವಿನಿಯೋಗಿಸಲಾಗುತ್ತಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆ ಶ್ರೀನಗರದಲ್ಲಿ ಸ್ಥಳೀಯ ಪೊಲೀಸ್ ಮತ್ತು ಅರೆ ಸೇನಾಪಡೆಯ ನೆರವಿನೊಂದಿಗೆ ಬುಧವಾರ ಬೆಳಗ್ಗೆ ಶೋಧಕಾರ್ಯ ನಡೆಸಲಾಗಿದೆ.
ಶ್ರೀನಗರದ ಪ್ರಮುಖ ಇಂಗ್ಲಿಷ್ ಪತ್ರಿಕೆ ಆವರಣದಲ್ಲಿನ ಟ್ರಸ್ಟ್ನ ಕಚೇರಿಯಲ್ಲಿ ಶೋಧ ಕಾರ್ಯಚರಣೆ ನಡೆಸಲಾಯಿತು. ಪತ್ರಕರ್ತ ಪರ್ವೈಜ್ ಬುಖಾರಿ ಮತ್ತು ಗೌಹರ್ ಗಿಲಾನಿ ನಿವಾಸದ ಮೇಲೂ ಎನ್ಐಎ ದಾಳಿ ನಡೆಸಿತ್ತು. ಇದರ ಜೊತೆಗೆ ಕಾಶ್ಮೀರದಲ್ಲಿ ಎನ್ಜಿಒ ನಡೆಸುತ್ತಿರುವ ಖುರಾಮ್ ಪರ್ವೇಜ್ ಎಂಬಾತನ ನಿವಾಸದ ಮೇಲೆ ಇಂದು ದಾಳಿ ನಡೆಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications