ಲಷ್ಕರ್, ಜೈಷೆ ಸಂಭಾವ್ಯ ದಾಳಿ, ಕಾಶ್ಮೀರದಲ್ಲೇ ಉಳಿದ ಅಜಿತ್
ಶ್ರೀನಗರ, ಆಗಸ್ಟ್ 12: ಕಣಿವೆ ರಾಜ್ಯ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರ ರದ್ದುಗೊಳಿಸಿದ ಬಳಿಕ ಬಿಗುವಿನ ಪರಿಸ್ಥಿತಿ ಉಂಟಾಗಿತ್ತು. ಆದರೆ, ಈಗ ಬಕ್ರೀದ್ ಗಾಗಿ ಅನೇಕ ಜಿಲ್ಲೆಗಳಲ್ಲಿ ನಿರ್ಬಂಧ ಹಿಂಪಡೆಯಲಾಗಿದ್ದು, ಸಾರ್ವಜನಿಕರು ಮಾರುಕಟ್ಟೆಯಲ್ಲಿ ಖರೀದಿ ನಿರತಾಗಿರುವ ದೃಶ್ಯ ಕಂಡು ಬಂದಿದೆ.
ಕಲಂ 370ರದ್ದುಗೊಂಡ ಬಳಿಕ ಕಣಿವೆ ರಾಜ್ಯಕ್ಕೆ ಬಂದಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ. ಬಕ್ರೀದ್, ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಬಾ ಹಾಗೂ ಜೈಷೆ ಎ ಮೊಹಮ್ಮದ್ ನಿಂದ ಸಂಭಾವ್ಯ ದಾಳಿಯ ಮುನ್ಸೂಚನೆ ಸಿಕ್ಕಿದೆ. ಆಗಸ್ಟ್ 15ರ ತನಕ ಕಾಶ್ಮೀರದಲ್ಲೇ ಉಳಿಯಲಿದ್ದು, ಕಣಿವೆ ರಾಜ್ಯದಲ್ಲಿ ತ್ರಿವರ್ಣ ಧ್ವಜಾರೋಹಣ ಮುಗಿಸಿಕೊಂಡು ರಾಷ್ಟ್ರ ರಾಜಧಾನಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.
ಉಗ್ರರ ಚಟುವಟಿಕೆ ಬಗ್ಗೆ ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಅನ್ವಯ ಅಜಿತ್ ದೋವಲ್ಅವರು ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ಅಗತ್ಯ ಕಾರ್ಯತಂತ್ರ ರೂಪಿಸಿದ್ದು, ಬಕ್ರೀದ್ ಹಾಗೂ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಸೇನೆಗೆ ಸೂಚನೆ ನೀಡಲಾಗಿದೆ.

ಭಾರತದ ಗಡಿ ಭದ್ರತಾ ಪಡೆ, ಭೂ ಸೇನೆ, ನೌಕಾಪಡೆ ಗಸ್ತು ತಿರುಗಾಟ ಆರಂಭವಾಗಿದ್ದು, ಸದ್ಯ ಭಾರತದ ರೆಡಾರ್ ಕಣ್ಣಿಗೆ ಉಗ್ರರ ಯಾವುದೆ ಚಟುವಟಿಕೆಗಳು ದಾಖಲಾಗಿಲ್ಲ. ಇತ್ತ ಕಾಶ್ಮೀರದಲ್ಲಿರುವ ಉಗ್ರ ಬೆಂಬಲಿತ ಸಂಘಟನೆ, ಸ್ಲೀಪರ್ ಸೆಲ್ ಗಳು ಸಕ್ರಿಯವಾಗದಂತೆ ಹಿಡಿತ ಸಾಧಿಸಲಾಗಿದೆ. ಲಷ್ಕರ್ ಇ ತೋಯ್ಬಾ, ಜೈಷ್ ಎ ಮೊಹಮ್ಮದ್ ಅಲ್ಲದೆ ಸ್ಟೂಡೆಂಟ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ, ಇಸ್ಲಾಮಿಕ್ ಸ್ಟೇಟ್ ಹಾಗೂ ಹರ್ಕತ್ ಉಲ್ ಮುಜಾಹಿದ್ದೀನ್ ಸಂಘಟನೆಗಳಿಂದ ಸಂಭಾವ್ಯ ದಾಳಿ ಬಗ್ಗೆ ಮಾಹಿತಿಯಿದೆ.
ಜಮ್ಮು ಮತ್ತು ಕಾಶ್ಮೀರವಲ್ಲದೆ ನವದೆಹಲಿ, ಮುಂಬೈ ಅಥವಾ ಬೆಂಗಳೂರು ಈ ಬಾರಿ ಉಗ್ರರ ಟಾರ್ಗೆಟ್ ಆಗುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಮುಂಬೈ ಹಾಗೂ ದಕ್ಷಿಣ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಬೆಂಬಲಿಗರ ಇರುವಿಕೆ ಬಗ್ಗೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವರದಿಯಿಂದ ತಿಳಿದು ಬಂದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications