'ಪ್ರತ್ಯೇಕತಾವಾದಿಗಳನ್ನು ದಕ್ಷಿಣ ಭಾರತದ ಜೈಲಿಗೆ ಹಾಕಿ'
Recommended Video

ನವದೆಹಲಿ, ಫೆಬ್ರವರಿ 18: ಪುಲ್ವಾಮಾ ಆತ್ಮಾಹುತಿ ದಾಳಿಯ ನಂತರ ಪಾಕಿಸ್ತಾನ ಪರ ದನಿಯೆತ್ತುವರ ಕೊರಳನ್ನು ಬಿಗಿಗೊಳಿಸುತ್ತಿರುವ ಮೋದಿ ಸರ್ಕಾರ, ಪ್ರತ್ಯೇಕತಾವಾದಿಗಳಿಗೆ ನೀಡಿದ್ದ ವಿಶೇಷ ಭದ್ರತೆಯನ್ನು ಹಿಂಪಡೆದಿದೆ. ಈ ಬೆಳವಣಿಗೆಯನ್ನು R&AW ಸಂಸ್ಥೆಯ ಮಾಹಿ ಅಧಿಕಾರಿ ಅಮರ್ ಸ್ವಾಗತಿಸಿ, ಒನ್ಇಂಡಿಯಾ ಜತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮಿರ್ವಾಜ್ ಉಮರ್ ಫಾರೂಕ್, ಅಬ್ಧುಲ್ ಗನಿಭಟ್, ಬಿಲಾಲ್ ಲೋನ್, ಹಶೀಮ್ ಖುರೇಷಿ ಮತ್ತು ಶಬ್ಬೀರ್ ಶಾ ಅವರಿಗೆ ನೀಡಲಾಗಿದ್ದ ವಿಶೇಷ ಸವಲತ್ತು ಮತ್ತು ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ಪೊಲೀಸ್ ಹೆಡ್ ಕ್ವಾರ್ಟಸ್ ಈ ಬಗ್ಗೆ ನಿಗಾವಹಿಸಿದ್ದು, ಈ ಐವರಲ್ಲದೆ ಇನ್ನಿತರ ಪ್ರತ್ಯೆಕತಾವಾದಿಗಳನ್ನು ಗುರುತಿಸಿ ಅವರಿಗೆ ನೀಡಿರುವ ಸೌಲಭ್ಯವನ್ನು ಹಿಂಪಡೆಯಲಾಗುವುದು ಎಂದು ರಾಜ್ಯಪಾಲರ ಸಹಿ ಇರುವ ಆದೇಶದ ಪ್ರತಿಯಲ್ಲಿ ಹೇಳಲಾಗಿದೆ.

2004ರಲ್ಲಿ ಪ್ರತ್ಯೇಕತಾವಾದಿಗಳಿಗೆ ವಿಶೇಷ ಭದ್ರತೆ ನೀಡುವ ನಿರ್ಣಯ ಕೈಗೊಳ್ಳಲಾಯಿತು. ಎಸ್ಎಎಸ್ ಗುಲಾನಿ ನೇತೃತ್ವದ ಗುಂಪು ತಮ್ಮ ನಿಲುವಿಗೆ ಬದ್ಧವಾಗಿದ್ದು, ಕಾಶ್ಮೀರವನ್ನು ಪ್ರತ್ಯೇಕ ರಾಜ್ಯವನ್ನಾಗಿ ದೆಹಲಿ ಆಡಳಿತ ಒಪ್ಪಿಕೊಳ್ಳಲಿ ಎಂದು ಆಗ್ರಹಿಸಿದರು.
ಆದರೆ, ಮಿರ್ವಾಜ್ ನೇತೃತ್ವದ ಗುಂಪಿನ ಜತೆ ಮಾತುಕತೆ ನಡೆಸಿದ ಅಂದಿನ ಕೇಂದ್ರ ಸರ್ಕಾರವು, ಪ್ರತ್ಯೇಕತಾವಾದಿಗಳಿಗೆ ಈ ವಿಶೇಷ ಸೌಲಭ್ಯ ನೀಡಲು ನಿರ್ಧರಿಸಿತ್ತು.
'ರಾ' ಮಾಜಿ ಅಧಿಕಾರಿ ಪ್ರತಿಕ್ರಿಯೆ: ಮೋದಿ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಅಮರ್ ಭೂಷಣ್ ಅವರು, ಈ ನಡೆಯನ್ನು ತುಂಬಾ ಮುಂಚಿತವಾಗಿ ಮಾಡಬೇಕಿತ್ತು. ಎಲ್ಲಾ ಪ್ರತ್ಯೇಕತಾವಾದಿಗಳು, ದೇಶ ವಿರೋಧಿಗಳಿಗೆ ನೀಡುವ ಸವಲತ್ತುಗಳನ್ನು ರದ್ದು ಮಾಡಬೇಕು. ಎಲ್ಲರನ್ನು ಬಂಧಿಸಿ, ದಕ್ಷಿಣ ಭಾರತದ ಜೈಲಿನಲ್ಲಿರಿಸಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕಾರವೆ ಎಲ್ಲವೂ ನಡೆಯಬೇಕು ಎಂದರೆ ಎಂದಿಗೂ ಸಮಸ್ಯೆ ಬಗೆಹರಿಸಲು ಸಾಧ್ಯವಾಗದು ಎಂದರು.
ಫೆ.14 ರಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಆವಂತಿಪೊರ ಎಂಬಲ್ಲಿ ಪಾಕ್ ಮೂಲದ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕ ಆದಿಲ್ ಅಹ್ಮದ್ ದಾರ್ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆಸಿದ ಪರಿಣಾಮ ಸಿಆರ್ ಪಿಎಫ್ ನ 44 ಯೋಧರು ಹುತಾತ್ಮರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications