ಕಾಶ್ಮೀರದ ಕೌನ್ಸಿಲರ್ಗಳ ಸಭೆ ಮೇಲೆ ಭಯೋತ್ಪಾದಕ ದಾಳಿ: ಇಬ್ಬರು ಸಾವು
ಶ್ರೀನಗರ, ಮಾರ್ಚ್ 30: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಸೋಮವಾರ ಫರೀದಾ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ (ಬಿಡಿಸಿ) ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ವೇಳೆ ಫರೀದಾ ಖಾನ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಕೋರರನ್ನು ಪತ್ತೆ ಮಾಡಲು ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದಾರೆ.
ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಅಧ್ಯಕ್ಷರ ಮೇಲೆ ದಾಳಿ ನಡೆದ ನಂತರ, ಈ ಪ್ರದೇಶದಲ್ಲಿ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ಕೌನ್ಸಿಲರ್ ಒಬ್ಬರು ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದಾರೆ.
ಕೌನ್ಸಿಲರ್ಗಳ ಸಭೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದ್ದು, ಬಿಜೆಪಿ ಮುಖಂಡ ಫರೀದಾ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದರೆ, ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

""ಮುನ್ಸಿಪಲ್ ಕಚೇರಿ ಸೊಪೋರ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಶಫ್ಕತ್ ಅಹ್ಮದ್ ಮತ್ತು ಕೌನ್ಸಿಲರ್ ರಿಯಾಜ್ ಅಹ್ಮದ್ ಸಾವನ್ನಪ್ಪಿದ್ದು, ಮತ್ತು ಕೌನ್ಸಿಲರ್ ಶಮ್ಸ್-ಉದ್-ದಿನ್ ಪೀರ್ ಗಾಯಗೊಂಡರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ'' ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರ ವಲಯದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸೇನಾ ವಲಯದ ಕಮಾಂಡರ್, ಸಿಆರ್ಪಿಎಫ್ನ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಮತ್ತು ಸೊಪೋರ್ನ ಪೊಲೀಸ್ ಅಧೀಕ್ಷಕರೊಂದಿಗೆ ಸಭೆ ನಡೆಸಿದರು. ದಾಳಿಯ ಸಮಯದಲ್ಲಿ ಹಾಜರಿದ್ದರೂ ಸೂಕ್ತವಾಗಿ ಪ್ರತೀಕಾರ ತೀರಿಸದ ನಾಲ್ಕು ವೈಯಕ್ತಿಕ ಭದ್ರತಾ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಲಾಗಿದೆ.
ವಿಜಯ್ ಕುಮಾರ್ ಪ್ರಕಾರ, ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಇಬ್ಬರು ಉಗ್ರರು ಭಾಗಿಯಾಗಿದ್ದಾರೆ. ಇದರ ಮಧ್ಯೆ, ಲಷ್ಕರ್ ಅವರ ಮತ್ತೊಂದು ಸಂಘಟನೆ ಎಂದು ನಂಬಲಾದ ಹೊಸ ಭಯೋತ್ಪಾದಕ ಗುಂಪು ದಿ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications