ಅನಂತ್ ನಾಗ್ ನಲ್ಲಿ ಉಗ್ರರ ದಾಳಿಗೆ 5 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮ
ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ), ಜೂನ್ 12: ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬುಧವಾರ ಕಾವಲು ಪಡೆಯ ಸಿಆರ್ ಪಿಎಫ್ ಸಿಬ್ಬಂದಿಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದರಲ್ಲಿ 5 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿ ವೇಳೆ ಪೊಲೀಸ್ ಇನ್ ಸ್ಪೆಕ್ಟರ್ ಹಾಗೂ ನಾಗರಿಕರೊಬ್ಬರಿಗೆ ಗಾಯಗಳಾಗಿವೆ.
ಐಎಸ್ ಉಗ್ರ ಸಂಘಟನೆಯಿಂದ ಭಾರೀ ಕೃತ್ಯಕ್ಕೆ ಸಂಚು, ಆರು ಮಂದಿ ಬಂಧನ
ವರದಿಗಳ ಪ್ರಕಾರ, ಇಬ್ಬರು ಉಗ್ರಗಾಮಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಒಬ್ಬನನ್ನು ಭದ್ರತಾ ಪಡೆಯವರು ಕೊಂದಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೆ.ಪಿ.ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ವಯಂಚಾಲಿತ ರೈಫಲ್ ಗಳಿಂದ ಭಯೋತ್ಪಾದಕರು ದಾಳಿ ನಡೆಸಿ, ಗ್ರನೇಡ್ ಎಸೆದಿದ್ದಾರೆ.
ಅನಂತ್ ನಾಗ್ ಪೊಲೀಸ್ ಠಾಣೆಯ ಅಧಿಕಾರಿ ಅರ್ಷದ್ ಅಹ್ಮದ್ ಅವರಿಗೆ ಸಹ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಗರ್ ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆದ ನಾಲ್ಕನೇ ತಿಂಗಳು ಪೂರ್ಣಗೊಳ್ಳುವ ಹೊತ್ತಿಗೆ ಈ ದಾಳಿ ನಡೆದಿದೆ.