ಶ್ರೀನಗರದಲ್ಲಿ ಬಿಜೆಪಿ ನಾಯಕರೊಬ್ಬರ ಮನೆ ಮೇಲೆ ಉಗ್ರರ ದಾಳಿ
ಶ್ರೀನಗರ, ಏಪ್ರಿಲ್ 1: ಬಿಜೆಪಿ ನಾಯಕರೊಬ್ಬರ ಮನೆಯ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಸಹಾಯಕ್ಕೆಂದು ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶ್ರೀನಗರದ ನೌಗಾಮ್ನಲ್ಲಿ ಈ ಘಟನ ನಡೆದಿದೆ, ಬಿಜೆಪಿ ನಾಯಕನ ಮನೆ ಮೇಲೆ ಉಗ್ರರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆ ತರುವಷ್ಟರಲ್ಲೇ ಪೊಲೀಸ್ ಪೇದೆ ಸಾವನ್ನಪ್ಪಿದ್ದರು ಎಂದು ವೈದ್ಯ ನಾಜೀರ್ ಚೌದರಿ ತಿಳಿಸಿದ್ದಾರೆ. ಗುಂಡಿನ ದಾಳಿ ನಂತರ ಉಗ್ರರು ಅಲ್ಲಿಂದ ಪರಾರಿಯಾಗಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನ್ವರ್ ಅಹ್ಮದ್ ಅವರ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸ್ ಪೇದೆ ರಾಮೀಜ್ ರಾಜಾ ಗಾಯಗೊಂಡಿದ್ದರು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಪರಿಶೀಲಿಸಿದ ವೈದ್ಯರು ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
Recommended Video
ಇಂದಿನಿಂದ ಸಾರಿಗೆ ನೌಕರರ ಚಳುವಳಿ ಆರಂಭ, ಏ.7ಕ್ಕೆ ಬಸ್ ಸಂಚಾರ ಸ್ಥಗಿತ | Oneindia Kannada












Click it and Unblock the Notifications