ಜಮ್ಮುವಿನಲ್ಲಿ 15 ಸಿಐಎಸ್ಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಉಗ್ರರ ದಾಳಿ
ಶ್ರೀನಗರ, ಏಪ್ರಿಲ್ 22 : ಬೆಳಗಿನ ಪಾಳಿಯ ಕರ್ತವ್ಯಕ್ಕೆ ತೆರಳುತ್ತಿದ್ದ 15 ಮಂದಿ ಸಿಐಎಸ್ಎಫ್ ಸಿಬ್ಬಂದಿ ಇದ್ದ ಬಸ್ ಮೇಲೆ ಭಯೋತ್ಪಾದಕರು ಗ್ರೇನೆಡ್ ಹಾಗೂ ಗುಂಡಿನ ದಾಳಿ ಮಾಡಿರುವ ಘಟನೆ ಜಮ್ಮುವಿನ ಚಡ್ಡಾ ಕ್ಯಾಂಪ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಸಿಐಎಸ್ಎಫ್ ಒಬ್ಬ ಎಎಸ್ಐ ಹುತಾತ್ಮರಾಗಿದ್ದು, 9 ಮಂದಿ ಯೋಧರು ಗಾಯಗೊಂಡಿದ್ದಾರೆ ಅಂತ ಸೇನಾ ಮೂಲಗಳು ತಿಳಿಸಿದೆ.
ಬೆಳಿಗ್ಗೆ 4.25 ರ ಸುಮಾರಿಗೆ ಉಗ್ರರರು ಯೋಧರಿದ್ದ ಬಸ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಸಿಐಎಸ್ಎಫ್ ಯೋಧರು ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಆದ್ರೆ ಉಗ್ರರು ಆ ಸ್ಥಳ ಬಿಟ್ಟು ಓಡಿ ಹೋಗಿದ್ದಾರೆ ಅಂತ ಸಿಐಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಮ್ಮುವಿನ ಮತ್ತೊಂದು ಕಡೆಯಾದ ಸುಂಜ್ವಾನ್ ಪ್ರದೇಶದಲ್ಲೂ ಭದ್ರತಾ ಪಡೆ ಹಾಗೂ ಉಗ್ರರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಶುಕ್ರವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸೇರಿದಂತೆ ಭದ್ರತಾ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತು ನಾಲ್ವರು ಯೋಧರು ಗಾಯಗೊಂಡಿದ್ದಾರೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಪ್ರಧಾನಿ ಮೋದಿ ಇದೇ ಭಾನುವಾರ ಜಮ್ಮುವಿನ ಸಾಂಬಾ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಮೋದಿ ಭೇಟಿಗೂ ಮುನ್ನವೇ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾವಳಿ ಹೆಚ್ಚಾಗಿದ್ದು, ಭದ್ರತಾ ಪಡೆ ಉಗ್ರರನ್ನ ಮಟ್ಟ ಹಾಕಲು ಪಣ ತೊಟ್ಟಿದೆ. ಪ್ರಧಾನಿ ಬರುವ ದಿನದಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಯಾವುದೇ ಉಗ್ರ ಚಟುವಟಿಕೆಗಳು ನಡೆಯದಂತೆ ಕಣ್ಗಾವಲಿಟ್ಟಿದ್ದು, ಹೆಚ್ಚಿನ ಭದ್ರತೆಯನ್ನ ಒದಗಿಸಿದೆ.

ಇನ್ನು ಭಯೋತ್ಪಾದಕರು ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸೇನಾ ಅಧಿಕಾರಿಗಳು ಸುತ್ತಮುತ್ತಲ ಪ್ರದೇಶದಲ್ಲಿರುವ ಎಲ್ಲಾ ಖಾಸಗಿ, ಸರ್ಕಾರಿ ಶಾಲೆಗಳನ್ನ ಬಂದ್ ಮಾಡಿಸಿದ್ದಾರೆ. ಅಲ್ಲದೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications