'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಕಾಶ್ಮೀರದ ಮಾಜಿ ಸಿಎಂ ಆಡಿದ ಮಾತು ಎಂಥದ್ದು?
ಹೈದ್ರಾಬಾದ್, ಮಾರ್ಚ್ 22: ದೇಶದಲ್ಲಿ ಸಖತ್ ಸದ್ದು ಮಾಡುತ್ತಿರುವ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಪ್ರಚಾರಕ್ಕಾಗಿ ಮಾಡಿರುವ ಚಿತ್ರ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ದೂಷಿಸಿದ್ದಾರೆ.
"ಅದು ಪ್ರಚಾರಕ್ಕಾಗಿ ಮಾಡಿರುವ ಚಿತ್ರ. ರಾಜ್ಯದಲ್ಲಿ ಈ ಹಿಂದೆ ನಡೆದಿರುವ ದುರಂತ ಹಿಂದೂ ಮತ್ತು ಮುಸ್ಲಿಂ ಎನ್ನದೇ ಎಲ್ಲರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಆ ದುರಂತವನ್ನು ನೆನೆಸಿಕೊಂಡರೆ, ಇಂದಿಗೂ ನನ್ನ ಮನಸ್ಸಿಗೆ ನೋವಾಗುತ್ತದೆ. ಅದರಲ್ಲಿ ಜನಾಂಗೀಯ ನಿರ್ಮೂಲನೆಯಲ್ಲಿ ಆಸಕ್ತಿ ಹೊಂದಿರುವ ರಾಜಕೀಯ ಪಕ್ಷಗಳ ಅಂಶವಿದೆ, "ಎಂದು ಅವರು ಹೇಳಿದರು.
ಕಳೆದ 1990ರಲ್ಲಿ ಕಾಶ್ಮೀರ್ ದಂಗೆಯ ಸಂದರ್ಭದಲ್ಲಿ ಕಾಶ್ಮೀರಿ ಪಂಡಿತರು ಅನುಭವಿಸಿದ ಕ್ರೂರ ನೋವುಗಳ ನಿಜವಾದ ಕಥೆಯನ್ನು ಕಾಶ್ಮೀರ ಫೈಲ್ಸ್ ಹೇಳುತ್ತದೆ. ಆ ಸಮಯದಲ್ಲಿ ಸರ್ಕಾರಗಳು ನಿಷ್ಕ್ರಿಯವಾಗಿದ್ದವು ಎಂಬ ಆರೋಪಗಳನ್ನು ಫಾರೂಕ್ ಅಬ್ದುಲ್ಲಾ ತಳ್ಳಿ ಹಾಕಿದ್ದಾರೆ.

ಸತ್ಯ ತಿಳಿಯಲು ಹೀಗೆ ಮಾಡಿ ಎಂದ ಫಾರೂಕ್:
ಕಾಶ್ಮೀರದಲ್ಲಿ 1990ರಲ್ಲಿ ನಡೆದ ದಂಗೆಯ ಕುರಿತು ನಿಜವಾದ ಸತ್ಯವನ್ನು ತಿಳಿಯಲು ಈ ಸಿನಿಮಾ ನೋಡಿದರೆ ಸಾಕಾಗುವುದಿಲ್ಲ. "ಜನರು ಸತ್ಯವನ್ನು ತಿಳಿದುಕೊಳ್ಳಲು ಬಯಸಿದರೆ, ಅಂದಿನ ಕಾಲದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಮುಸರ್ ರಜಾ ಅಥವಾ ಆ ಸಮಯದಲ್ಲಿ ಕೇಂದ್ರ ಸಚಿವರಾಗಿದ್ದ ಆರಿಫ್ ಮುಹಮ್ಮದ್ ಖಾನ್ ಅಂಥವರನ್ನು ಮಾತನಾಡಿಸಿ," ಎಂದರು.
ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ನಿಂದ 1989ರಲ್ಲಿ ಮುಫ್ತಿ ಮೊಹಮ್ಮದ್ ಸಯೀದ್ ಪುತ್ರಿ ರುಬಯ್ಯ ಅಪಹರಣದ ಬಗ್ಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, "ಕೇಂದ್ರ ಸರ್ಕಾರದವರು ನಾವು ಬಂಧಿಸಿದ್ದ ಐದು ಜನರನ್ನು ಬಿಡುಗಡೆಗೊಳಿಸಲು ಬಯಸಿದಾಗ ಅದಕ್ಕೆ ನಾನು ನಿರಾಕರಿಸಿದೆ. ಅಂದು ಬಿಜೆಪಿ ಬೆಂಬಲಿತ ವಿಪಿ ಸಿಂಗ್ ಭಾರತ ಸರ್ಕಾರದ ನೇತೃತ್ವ ವಹಿಸಿದ್ದರು," ಎಂದರು.
"ಮೃತ ವ್ಯಕ್ತಿಯ ಬಗ್ಗೆ ಈ ರೀತಿ ಮಾತನಾಡುವುದು ತಪ್ಪಾಗುತ್ತದೆ, ಆದರೆ ಆ ಕಾಲದ ರಾಜ್ಯಪಾಲರು ಕಾಶ್ಮೀರಿ ಪಂಡಿತರನ್ನು ಬಸ್ಗಳಲ್ಲಿ ತುಂಬಿ ಕಳುಹಿಸಿದರು. ಎರಡು ತಿಂಗಳಿನಲ್ಲಿ ನಾನು ಸೇನೆಯನ್ನು ಬಳಸಿಕೊಂಡು ಅವರನ್ನು ಮಟ್ಟ ಹಾಕುತ್ತೇನೆ. ಈ ಪ್ರತೀಕಾರದ ಸಂದರ್ಭದಲ್ಲಿ ಅದರ ಪ್ರಭಾವ ನಿಮ್ಮ ಮೇಲೆ ಆಗಬಾರದು. ಇನ್ನೆರೆಡು ತಿಂಗಳಿನಲ್ಲಿ ನಾನು ನಿಮ್ಮನ್ನೆಲ್ಲ ವಾಪಸ್ ಕರೆಸಿಕೊಳ್ಳುತ್ತೇನೆ ಅಂತಾ ಹೇಳಿದ್ದರು," ಎಂದು ಫಾರೂಕ್ ಅಬ್ದುಲ್ಲಾ ದೂಷಿಸಿದರು.
ದೇಶದಲ್ಲಿ ಸದ್ದು ಮಾಡುತ್ತಿರುವ "ದಿ ಕಾಶ್ಮೀರ್ ಫೈಲ್ಸ್"
ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ಈ ಚಲನಚಿತ್ರದ ಕಳೆದ ಮಾರ್ಚ್ 11ರಂದು ಬಿಡುಗಡೆಯಾಗಿತ್ತು. 1990ರ ದಶಕದ ವೇಳೆಯಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು, ಎಷ್ಟರ ಮಟ್ಟಿಗೆ ಕಿರುಕುಳ ನೀಡಲಾಯಿತು ಎಂಬುದರ ಬಗ್ಗೆ ಚಿತ್ರಿಸಲಾಗಿದೆ. ಅದಲ್ಲದೇ ರಾತ್ರೋರಾತ್ರಿ ಕಾಶ್ಮೀರಿ ಪಂಡಿತರನ್ನು ಮನೆಯಿಂದ ಓಡಿಸುವುದಕ್ಕೆ ನಡೆಸಿದ ದೌರ್ಜನ್ಯದ ಕುರಿತು ಎತ್ತಿ ತೋರಿಸಲಾಗಿದೆ. ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ ಹಾಗೂ ಪ್ರಕಾಶ್ ಬೆಳವಡಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications