"ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆದಿರುವುದೇ ಸುಳ್ಳು"
ಶ್ರೀನಗರ್, ನವೆಂಬರ್.19: ಭಾರತ ಮತ್ತು ಪಾಕಿಸ್ತಾನದ ವಾಸ್ತವ ಗಡಿ ರೇಖೆಯಲ್ಲಿ ಯಾವುದೇ ರೀತಿ ಭಯೋತ್ಪಾದನಾ ಚಟುವಟಿಕೆ ಮತ್ತು ಗುಂಡಿನ ದಾಳಿ ನಡೆದಿಲ್ಲ ಎಂದು ಭಾರತೀಯ ಸೇನಾ ಚಟುವಟಿಕೆಗಳ ನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಪರಮಜಿತ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಓಕೆ) ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ನಡೆಯುತ್ತಿದ್ದು, ಪಾಕಿಸ್ತಾನ ಸೇನೆಯು ಉಗ್ರರಿಗೆ ಬೆಂಗಾಲವಾಗಿ ನಿಂತಿದೆ. ಭಾರತೀಯ ಸೇನೆ ಮತ್ತು ಪಾಕಿಸ್ತಾನ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗೆಗಿನ ವರದಿಗಳೆಲ್ಲ ಸುಳ್ಳು ಎಂದು ಪರಮಜಿತ್ ಸಿಂಗ್ ಹೇಳಿದ್ದಾರೆ.
ಚಳಿಗಾಲಕ್ಕೂ ಮೊದಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೂಲಕ ಭಯೋತ್ಪಾದಕರನ್ನು ಭಾರತದ ಗಡಿ ನುಸುಳುವುದಕ್ಕೆ ಕುಮ್ಮಕ್ಕು ನೀಡಲಾಗುತ್ತಿದೆ. ಈ ಹಿನ್ನೆಲೆ ಪಿಓಕೆಯಲ್ಲಿ ಪಾಕಿಸ್ತಾನವು ಭಾರಿ ಸೈನಿಕರನ್ನು ಗಡಿ ಪ್ರದೇಶದಲ್ಲಿ ನಿಯೋಜಿಸಿದೆ ಎನ್ನುವ ಬಗ್ಗೆ ವರದಿಯಾಗಿತ್ತು.

ನವೆಂಬರ್.13ರಂದು ಗಡಿಯಲ್ಲಿ ಪ್ರತೀಕಾರ ದಾಳಿ:
ಕಳೆದ ನವೆಂಬರ್.13ರಂದು ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯು ನಡೆಸಿದ ಪ್ರತಿದಾಳಿಯಲ್ಲಿ ಪಾಕಿಸ್ತಾನದ 11 ಮಂದಿ ಯೋಧರು ಮೃತಪಟ್ಟಿದ್ದು, 16ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಾಕಿಸ್ತಾನ ಸೇನಾ ಯೋಧರು ಮತ್ತು ಮೂವರು ಪಾಕಿಸ್ತಾನ ವಿಶೇಷ ಸೇವಾ ಪಡೆ ಯೋಧರು ಸೇರಿದಂತೆ 11 ಮಂದಿ ಪಾಕಿಸ್ತಾನ ಯೋಧರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. 16ಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿತ್ತು.
ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ:
ಪಾಕಿಸ್ತಾನ ಸೇನೆಯು 2020ರಲ್ಲಿ ಕದನ ವಿರಾಮ ಉಲ್ಲಂಘನೆ ಮೂಲಕ ಪದೇ ಪದೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಕಳೆದ ಆರು ತಿಂಗಳಿನಲ್ಲೇ 2000ಕ್ಕಿಂತ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಅಂಕಿ ಅಂಶಗಳ ಮೂಲಕ ಗೊತ್ತಾಗುತ್ತಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ. ಜೂನ್ ಮೊದಲ 10 ದಿನಗಳಲ್ಲೇ 114 ಬಾರಿ ಕದನ ವಿರಾಮ ಉಲ್ಲಂಘಿಸಲಾಗಿದೆ. 2019ರ ಜೂನ್ ಮೊದಲ 10 ದಿನಗಳಲ್ಲಿ 118 ಬಾರಿ ಕದನ ವಿರಾಮ ಉಲ್ಲಂಘಿಸಿದ್ದರೆ, 2018ರಲ್ಲಿ ಇದೇ ಅವಧಿಯಲ್ಲಿ ಕೇವಲ 14 ಬಾರಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications