ಶ್ರೀನಗರದಲ್ಲಿ ಎನ್ ಕೌಂಟರ್; ಮೂವರು ಉಗ್ರರ ಹತ್ಯೆ
ಶ್ರೀನಗರ, ಆಗಸ್ಟ್ 30 : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್ ಕೌಂಟರ್ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬರು ಪೊಲೀಸ್ ಅಧಿಕಾರಿ ಸಹ ಹುತಾತ್ಮರಾಗಿದ್ದಾರೆ.
ಶ್ರೀನಗರದ ಪಂಥಾ ಚೌಕ್ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಪ್ರದೇಶವನ್ನು ತಮ್ಮ ವಶಕ್ಕೆ ಪಡೆದಿರುವ ಭದ್ರತಾ ಪಡೆಗಳು ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ, ಓರ್ವ ಉಗ್ರ ಶರಣಾಗತಿ
ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇದುವರೆಗೂ ಮೂವರು ಉಗ್ರರನ್ನು ಕೊಂದು ಹಾಕಲಾಗಿದೆ. ಎಎಸ್ಐ ಬಾಬು ರಾಮ್ ಎಂಬ ಪೊಲೀಸ್ ಅಧಿಕಾರಿಯೂ ಹುತಾತ್ಮರಾಗಿದ್ದಾರೆ.
ಪುಲ್ವಾಮಾ ದಾಳಿಗೆ ಜೈಷ್ ಉಗ್ರ ಸಂಘಟನೆ ವ್ಯಯಿಸಿದ್ದ ಹಣವೆಷ್ಟು?
ಶನಿವಾರ ರಾತ್ರಿ ಆರಂಭವಾದ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಇನ್ನೂ ಇಬ್ಬರು ಉಗ್ರರು ಅಡಗಿರಬಹುದು ಎಂದು ಶಂಕಿಸಲಾಗಿದೆ. ಪಂಥಾ ಚೌಕ್ ಪ್ರದೇಶಕ್ಕೆ ಉಗ್ರರು ಜೀಪ್ನಲ್ಲಿ ಬಂದಿರಬಹುದು ಎಂದು ಶಂಕಿಸಲಾಗಿದೆ.
ಬೆಂಗಳೂರು; ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸದಸ್ಯನ ಬಂಧನ