ಕಾಶ್ಮೀರದಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರ, ಫೆಬ್ರವರಿ 22: ಭಾರತೀಯ ಸೇನೆಯು ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಶನಿವಾರ ಬೆಳಗಿನ ಜಾವ ನಡೆದ ಸೇನಾ ಹಾಗೂ ಉಗ್ರರ ನಡುವಿನ ಗುಂಡಿನ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಮಾಡಲಾಗಿದೆ.
ಕಾಶ್ಮೀರದ ಸಂಗಮ್ನಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಹಾಗೂ ಸೇನೆಯು ಉಗ್ರರನ್ನು ಸದೆಬಡಿದಿದ್ದು, ಅವರಿಂದ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಫೆಬ್ರವರಿ 19ರಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಸೇನೆಯು ಮೂವರು ಉಗ್ರರನ್ನು ಜಮ್ಮು ಕಾಶ್ಮೀರದ ತ್ರಾಲ್ನಲ್ಲಿ ಹೊಡೆದುರುಳಿಸಿದೆ.
ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶ ಸುತ್ತಿ ಪುಲ್ವಾಮಾ ಹುತಾತ್ಮರ ಮನೆಯ ಮಣ್ಣು ಸಂಗ್ರಹಿಸಿದ ಬೆಂಗಳೂರಿಗ
ತ್ರಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ, ಭದ್ರತಾ ಪಡೆಯು ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಮಂಗಳವಾರ ಸಂಜೆ ಜಂಟಿ ಶೋಧ ಕಾರ್ಯಾಚರಣೆ ನೆಡಸಿತ್ತು.
ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ.ಹತ್ಯೆಯಾದ ಮೂವರು ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿತ್ತು.