ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಶ್ರೀನಗರ, ಮಾರ್ಚ್ 9: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಸೋಮವಾರ ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯನ್ನು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ, ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ರೈಫಲ್ಸ್ (ಆರ್ಆರ್), ಸಿಆರ್ ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ(ಎಸ್ಒಜಿ) ಮೇರೆಗೆ, ಶೋಪಿಯಾನ್ನಿಂದ ಸುಮಾರು 8 ಕಿ.ಮೀ. ದೂರದಲ್ಲಿನ ರೆಬಾನ್ನಲ್ಲಿ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದವು.
ಪುಲ್ವಾಮಾ ದಾಳಿ ಆರೋಪಿಗೆ ಜಾಮೀನು ಸಿಕ್ಕಿದೆ ಎಂಬುದು ಸುಳ್ಳು ಸುದ್ದಿ
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್ನಲ್ಲಿ ಸೋಮವಾರ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.
ಈ ಪ್ರದೇಶದಲ್ಲಿ ಇಬ್ಬರು ಇಲ್ಲವೇ ಮೂವರು ಅಡಗಿರುವ ಶಂಕೆ ಇದೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ.