ಉತ್ತರ ಪ್ರದೇಶ ಹೊಸ ಜಮ್ಮು ಕಾಶ್ಮೀರ ಎಂದ ಒಮರ್ ಅಬ್ದುಲ್ಲಾ
ಶ್ರೀನಗರ, ಅಕ್ಟೋಬರ್ 04: ಉತ್ತರ ಪ್ರದೇಶದಲ್ಲಿ ರೈತರ ಪ್ರತಿಭಟನೆ ಜತೆಗೆ ಹಿಂಸಾಚಾರವೂ ಕೂಡ ನಡೆದಿದ್ದು, ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ದೇಶದ ಹೊಸ ಜಮ್ಮು ಕಾಶ್ಮೀರ ಎಂದು ಕರೆದಿದ್ದಾರೆ. ಇನ್ನು ಭಾನುವಾರ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಅಲ್ಲದೇ ಘಟನಾ ಸ್ಥಳಕ್ಕೆ ವಿರೋಧ ಪಕ್ಷಗಳ ನಾಯಕರು ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದಕ್ಕೆ ಉತ್ತರ ಪ್ರದೇಶ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.

ಹಾಗೆಯೇ ಸೋಮವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
ಈ ಘಟನೆಯಿಂದಾಗಿ ಅನೇಕ ಮಂದಿ ರೈತರು ತೀವ್ರ ರೀತಿಯಲ್ಲಿ ಗಾಯಗೊಂಡಿರುವುದಾಗಿ ದೃಢಪಡಿಸದ ವರದಿಗಳು ಹೇಳಿವೆ. ಉದ್ರಿಕ್ತಗೊಂಡ ಪ್ರತಿಭಟನಾಕರರು ಎರಡು ಕಾರುಗಳನ್ನು ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಅನೇಕ ಪತ್ರಕರ್ತರು ಕೂಡಾ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಈ ಹಿಂಸಾಚಾರ ವರದಿ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಮೌರ್ಯ ಬನ್ಬೀರ್ಪುರ ಗ್ರಾಮಕ್ಕೆ ಭೇಟಿ ನೀಡುವುದನ್ನು ರದ್ದುಪಡಿಸಿದ್ದಾರೆ.
ಘಟನೆ ಕುರಿತು ಸಚಿವ ಅಜಯ್ ಮಿಶ್ರಾ ಅವರು ಹೇಳುತ್ತಿರುವುದೇ ಬೇರೆಯಾಗಿದೆ. 'ಪ್ರತಿಭಟನಾ ಸ್ಥಳಕ್ಕೆ ಕಾರು ತೆರಳಿದಾಗ ಅದರ ಮೇಲೆ ರೈತರು ದಾಳಿ ಮಾಡಿದ್ದಾರೆ. ಮನಸ್ಸಿಗೆ ಬಂದ ಹಾಗೆ ಕಲ್ಲು ತೂರಾಟ ನಡೆಸಿದ್ದಾರೆ. ಏಕಾಏಕಿ ದಾಳಿ ನಡೆದ ಕಾರಣ ಕಾರು ಅಪಘಾತವಾಗಿದೆ.
ಆಗ ಕಾರಿಗೆ ಸಿಲುಕಿ ಇಬ್ಬರು ರೈತರು ಮೃತಪಟ್ಟಿದ್ದಾರೆ' ಎಂದಿದ್ದಾರೆ. ಅಲ್ಲದೆ, 'ಅಪಘಾತದಲ್ಲಿ ಇಬ್ಬರು ರೈತರು ಮೃತಪಡುತ್ತಲೇ ರೈತರು ಮತ್ತಷ್ಟು ಹಿಂಸಾತ್ಮಕವಾಗಿ ದಾಳಿ ನಡೆಸಿದ್ದಾರೆ. ರೈತರ ದಾಳಿಯಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು ಹಾಗೂ ಒಬ್ಬ ಕಾರು ಚಾಲಕ ಮೃತಪಟ್ಟಿದ್ದಾರೆ' ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಕಳೆದ ಜನವರಿ 26ರಂದು ದಿಲ್ಲಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಬಳಿಕ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲೂ ಪ್ರತಿಭಟನೆ ಹಿಂಸಾರೂಪ ಪಡೆದಿದೆ.
ಜಿಲ್ಲಾಡಳಿತ ಹೇಳಿಕೆ: ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಎಂಟು ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಮೃತಪಟ್ಟವರಲ್ಲಿ ನಾಲ್ವರು ರೈತರಾದರೆ, ಉಳಿದ ನಾಲ್ವರು ಬಿಜೆಪಿ ಕಾರ್ಯಕರ್ತರಾಗಿದ್ದಾರೆ ಎಂದು ಹಿಂಸಾಚಾರದ ಬಳಿಕ ಮಾಹಿತಿ ನೀಡಿದೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಕಾರಣ ಕೂಡಲೇ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಪ್ರಸ್ತುತ ಪರಿಸ್ಥಿತಿ ತಹಬಂದಿಗೆ ಬಂದಿದೆ ಎಂದು ತಿಳಿಸಿದೆ.
ಪ್ರತಿಭಟನಾಕಾರರ ಮೇಲೆ ನುಗ್ಗಿದ್ದ ಕಾರೊಂದರಲ್ಲಿ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಇದ್ದರು ಎಂದು ಆರೋಪಿಸಲಾಗಿದೆ. ಸಚಿವರ ಪುತ್ರನ ಕಾರಿಗೆ ಸಿಲುಕಿಯೇ ಎಂಟು ರೈತರು ಮೃತಪಟ್ಟಿದ್ದಾರೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ. ಎಂಟು ರೈತರಲ್ಲ, ನಾಲ್ವರು ರೈತರು ಕಾರಿಗೆ ಸಿಲುಕಿಯೇ ಮೃತಪಟ್ಟಿದ್ದು, ಬಳಿಕ ಉಂಟಾದ ಹಿಂಸಾಚಾರದಲ್ಲಿ ಉಳಿದ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಬೆಂಗಾವಲು ಪಡೆ ಕಾರುಗಳು ರೈತರ ಮೇಲೆ ನುಗ್ಗಿದ ತಕ್ಷಣ ಪ್ರತೀಕಾರಕ್ಕೆ ಇಳಿದ ರೈತರು, ಕಲ್ಲು ತೂರಾಟ ನಡೆಸಿದರು. ಆಗ ಎರಡು ಕಾರುಗಳು ಉರುಳಿ ಬಿದ್ದು ಹಲವರು ಪ್ರತಿಭಟನಾಕಾರರ ಕೈಗೆ ಸಿಲುಕಿ ಥಳಿತಕ್ಕೊಳಗಾದರು. ಬಿಜೆಪಿಯ ಮೂವರು ಕಾರ್ಯಕರ್ತರು ಮತ್ತು ಕಾರಿನ ಚಾಲಕನನ್ನು ರೈತರು ಹೊಡೆದು ಸಾಯಿಸಿದರು ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
-
ಮಾಲ್ಡೀವ್ಸ್ನಲ್ಲಿ ಬೋಟ್ ಅಪಘಾತ: ನಾಪತ್ತೆಯಾಗಿರುವ ಭಾರತದ ಖ್ಯಾತ ರ್ಯಾಲಿ ಪಟು ಹರಿ ಸಿಂಗ್ಗಾಗಿ ಮುಂದುವರಿದ ಶೋಧ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications