ಪ.ಬಂಗಾಲ ಮೂಲದ ಆರು ಕಾರ್ಮಿಕರನ್ನು ಕುಲ್ಗಾಂನಲ್ಲಿ ಹತ್ಯೆ ಮಾಡಿದ ಉಗ್ರರು
ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ), ಅಕ್ಟೋಬರ್ 29: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ಆರು ಕಾರ್ಮಿಕರನ್ನು ಹತ್ಯೆ ಮಾಡಿದ್ದಾರೆ. ಜಮ್ಮು- ಕಾಶ್ಮೀರದ ರಾಜಧಾನಿ ಶ್ರೀನಗರ್ ನಿಂದ ಕುಲ್ಗಾಂ ಅರವತ್ತು ಕಿ.ಮೀ. ದೂರದಲ್ಲಿದೆ. ಕಳೆದ ಹದಿನೈದು ದಿನಗಳಿಂದ ಕಾಶ್ಮೀರದ ಹೊರಗಿನ ನಾಗರಿಕರನ್ನು ಗುರಿ ಮಾಡಿಕೊಂಡು ದಾಳಿ ಮಾಡಲಾಗ್ಗುತ್ತಿದೆ.
ಕುಲ್ಗಾಂನ ಕಟ್ರಸೂ ಹಳ್ಳಿಯ ಮನೆಯೊಂದಕ್ಕೆ ನುಗ್ಗಿದ ಉಗ್ರರು ಪಶ್ಚಿಮ ಬಂಗಾಲ ಮೂಲದ ಏಳು ಕಾರ್ಮಿಕರ ಮೇಲೆ ಗುಂಡು ಹಾರಿಸಿದ್ದು, ಆ ಪೈಕಿ ಝಹ್ರುದ್ದೀನ್ ಎಂಬ ವ್ಯಕ್ತಿಯ ಕಾಲಿಗೆ ಗುಂಡು ತಗುಲಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಉಳಿದ ಆರು ಮಂದಿ ಸಾವನ್ನಪ್ಪಿದ್ದಾರೆ.
ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಆ ನಂತರ ಸಂಖ್ಯೆ ಆರಕ್ಕೆ ಏರಿದೆ. ಪೊಲೀಸರು ಖಚಿತ ಪಡಿಸಿರುವ ಮಾಹಿತಿ ಪ್ರಕಾರ, ಉಗ್ರರಿಂದ ಹತ್ಯೆಯಾದ ಆರು ಕಾರ್ಮಿಕರು ಪಶ್ಚಿಮ ಬಂಗಾಲ ಮೂಲದವರೇ. ಮೂವರಿಂದ ನಾಲ್ವರು ಉಗ್ರಗಾಮಿಗಳು ಈ ದಾಳಿಯನ್ನು ನಡೆಸಿದ್ದಾರೆ.

ಯುರೋಪಿಯನ್ ಒಕ್ಕೂಟದ ಸಂಸದರ ನಿಯೋಗವು ಕಾಶ್ಮೀರಕ್ಕೆ ಭೇಟಿ ನೀಡಿದ ಮಂಗಳವಾರದಂದೇ ಈ ದಾಳಿ ನಡೆದಿದೆ. ಆಗಸ್ಟ್ ನಲ್ಲಿ ಜಮ್ಮು- ಕಾಶ್ಮೀರದ ವಿಶೇಷ ಸ್ಥಾನ ಮಾನ ರದ್ದು ಮಾಡಿದ ಮೇಲೆ ಭಾರತ ಅಥವಾ ವಿದೇಶದ ಜನಪ್ರತಿನಿಧಿಗಳು ಇದೇ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಸೋಮವಾರದಂದು ಉಧಂಪುರ್ ನ ಟ್ರಕ್ ಚಾಲಕನನ್ನು ಅನಂತ್ ನಾಗ್ ನಲ್ಲಿ ಉಗ್ರರು ಕೊಂದಿದ್ದರು. ಅಕ್ಟೋಬರ್ ಇಪ್ಪತ್ನಾಲ್ಕರಂದು ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರದ ಹೊರಗಿನ ಟ್ರಕ್ ಚಾಲಕನನ್ನು ಉಗ್ರರು ಹತ್ಯೆ ಮಾಡಿದ್ದರು. ಅಕ್ಟೋಬರ್ ಹದಿನಾಲ್ಕನೇ ತಾರೀಕು ಇಬ್ಬರು ಉಗ್ರರು ರಾಜಸ್ಥಾನ ನೋಂದಣಿ ಸಂಖ್ಯೆಯ ಟ್ರಕ್ ಚಾಲಕನನ್ನು ಕೊಂದು ಹಾಕಿದ್ದರು. ಶೋಪಿಯಾನ್ ಜಿಲ್ಲೆಯಲ್ಲಿ ಒಬ್ಬರ ಮೇಲೆ ಹಲ್ಲೆ ನಡೆದಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications