ವಿಳಂಬ ನೀತಿ ಸಂಸ್ಕೃತಿಯಿಂದ ದೇಶವನ್ನು ಹೊರ ತರುತ್ತೇವೆ: ಮೋದಿ
ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ), ಫೆಬ್ರವರಿ 3: ಜಮ್ಮು-ಕಾಶ್ಮೀರದ ಲೇಹ್ ನಲ್ಲಿ ಭಾನುವಾರ ಹಲವು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸರಕಾರ ಕೆಲಸ ಮಾಡುತ್ತಿರುವ ವೇಗವೇ ಸಾಕ್ಷಿ. ಇದು ನಿಧಾನ ಗತಿಯ ಸಂಸ್ಕೃತಿ ನಂಬುವುದಿಲ್ಲ ಎಂದು ಅವರು ಹೇಳಿದರು.
"ನಮ್ಮ ಸರಕಾರ ವೇಗವಾಗಿ ಕೆಲಸ ಮಾಡುವುದನ್ನು ನಂಬುತ್ತದೆ. ಈ ದೇಶದಲ್ಲಿ ಎಲ್ಲ ಕೆಲಸ ನಿಧಾನಕ್ಕೆ ಮಾಡುವ ಸಂಸ್ಕೃತಿ ಇತ್ತು. ಇನ್ನು ಮುಂದಿನ ಐದು ವರ್ಷದಲ್ಲಿ ಈ ವಿಳಂಬ ನೀತಿಯ ಸಂಸ್ಕೃತಿಯಿಂದ ಸಂಪೂರ್ಣವಾಗಿ ದೇಶವನ್ನು ಹೊರಗೆ ತರಲು ಬಯಸುತ್ತೇನೆ. ನಾವು ಏನೆಲ್ಲ ಯೋಜನೆ ಆರಂಭಿಸುತ್ತೇವೋ ಅದನ್ನು ಅಂದುಕೊಂಡ ಸಮಯದೊಳಗೆ ಪೂರ್ಣಗೊಳಿಸಲು ನಮ್ಮ ಪ್ರಯತ್ನ ಹಾಕುತ್ತೇವೆ" ಎಂದು ಮೋದಿ ಹೇಳಿದ್ದಾರೆ.
ಈ ಯೋಜನೆಗಳ ಉದ್ಘಾಟನೆ ಮೂಲಕ ಈ ಪ್ರದೇಶದ ಸಂಪರ್ಕ ವ್ಯವಸ್ಥೆ, ಲಡಾಖ್ ನ ಪ್ರವಾಸೋದ್ಯಮ ವೃದ್ಧಿ ಆಗುತ್ತದೆ. ಇದರೊಂದಿಗೆ ಉದ್ಯೋಗಾವಕಾಶಗಳು ಸಹ ವೃದ್ಧಿ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಐದು ಹೊಸದಾದ ಚಾರಣ ಮಾರ್ಗ ಉದ್ಘಾಟನೆ ಮಾಡುವುದಾಗಿ ಹೇಳಿದ ಅವರು, ಈ ಮಾರ್ಗಗಳ ಮೂಲಕ ನಿಮ್ಮ ಪ್ರವಾಸದ ಅನುಭೂತಿ ಇನ್ನಷ್ಟು ಅದ್ಭುತವಾಗಿರುತ್ತದೆ ಎಂದಿದ್ದಾರೆ.

ಲಡಾಖ್ ಅಟಾನಮಸ್ ಹಿಲ್ ಡೆವಲಪ್ ಮೆಂಟ್ ಕೌನ್ಸಿಲ್ ಕಾಯ್ದೆಗೆ ಬದಲಾವಣೆ ತಂದ ಬಗ್ಗೆ ಮಾತನಾಡಿದ ಅವರು, ಸಂಬಂಧಪಟ್ಟ ವೆಚ್ಚದ ವಿಚಾರದಲ್ಲಿ ಕೌನ್ಸಿಲ್ ಗೆ ಹೆಚ್ಚು ಅಧಿಕಾರ ನೀಡಲಾಗಿದೆ. ಈ ಭಾಗದ ಅಭಿವೃದ್ಧಿಗೆ ನೀಡಲಾದ ಮೊತ್ತವನ್ನು ಈಗ ಅಟಾನಮಸ್ ಕೌನ್ಸಿಲ್ ಬಿಡುಗಡೆ ಮಾಡುತ್ತದೆ ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications