ಪಾಕಿಸ್ತಾನಕ್ಕೆ ಜೈ ಎಂದ ಲೋಕಸಭೆ ಚುನಾವಣೆ ಅಭ್ಯರ್ಥಿ
ಶ್ರೀನಗರ, ಮಾರ್ಚ್ 25: ಜಮ್ಮು ಮತ್ತು ಕಾಶ್ಮೀರ ಕುಪ್ವಾರಾ ಲೋಕಸಭಾ ಕ್ಷೇತ್ರದ ನ್ಯಾಶ್ನಲ್ ಕಾನ್ಫಿರೆನ್ಸ್ ಅಭ್ಯರ್ಥಿ ಅಕ್ಬರ್ ಲೊನೆ ಹೊಸ ವಿವಾದವೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಪಾಕಿಸ್ತಾನಕ್ಕೆ ಅವಮಾನವಾಗುವಂತೆ ಮಾತನಾಡಿದರೆ ನಾನು ಸುಮ್ಮನಿರುವುದಿಲ್ಲ, ಅಂಥವರಿಗೆ ನಾನೂ ಅವಮಾನ ಮಾಡುತ್ತೇನೆ ಎಂದಿದ್ದರು.
"ಪಾಕಿಸ್ತಾನ ಸಮೃದ್ಧಿಯಿಂದಿರಬೇಕು. ಜೊತೆಗೆ ಪಾಕಿಸ್ತಾನ ಮತ್ತು ಭಾರತದ ನಡುವಿನ ಸಂಬಂಧ ಸೌಹಾರ್ದವಾಗಿರಬೇಕು. ಯಾರಾದರೂ ಪಾಕಿಸ್ತಾನಕ್ಕೆ ನೋವಾಗುವಂತೆ ಮಾತನಾಡಿದರೆ ಅಂಥವವರಿಗೆ ನಾನು ಹತ್ತು ಪಟ್ಟು ಹೆಚ್ಚು ನೋವು ಮಾಡುತ್ತೇನೆ" ಎಂದು ಅಕ್ಬರ್ ಹೇಳಿದರು.

"ಪಾಕಿಸ್ತಾನ ಮುಸ್ಲಿಂ ದೇಶ, ಅಕಸ್ಮಾತ್ ಅದಕ್ಕೆ ನೋವಾಗುವಂತೆ ನಾನು ಮಾತನಾಡಿದರೆ ನನಗೇ ನಾನು ಮೋಸ ಮಾಡಿಕೊಂಡಂತೆ" ಎಂದು ಅವರು ಹೇಳಿದರು.
ಪುಲ್ವಾಮಾದಲ್ಲಿ ನಲವತ್ತಕ್ಕೂ ಹೆಚ್ಚು ಸೈನಿಕರನ್ನು ಜೈಶ್ ಇ ಮೊಹಮ್ಮದ್ ಸಂಘಟನೆಯ ಉಗ್ರ ಬಲಿತೆಗೆದುಕೊಂಡ ಘಟನೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹಳಸಿದೆ. ಇಡೀ ದೇಶವೂ ಪಾಕಿಸ್ತಾನವನ್ನು ಹಳಿಯುತ್ತಿದ್ದರೆ ಅಕ್ಬರ್ ಅವರು ಪಾಕಿಸ್ತಾನವನ್ನು ಸಮರ್ಥಿಸುತ್ತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications