ಅನಾರೋಗ್ಯದ ರಜಾದಲ್ಲಿದ್ದರೂ ಶ್ರೀನಗರದ ಸ್ಕ್ವಾಡ್ರನ್ ನಲ್ಲೇ ಅಭಿನಂದನ್
ಶ್ರೀನಗರ್, ಮಾರ್ಚ್ 26: ಕಳೆದ ತಿಂಗಳು ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕು, ಅದಾಗಿ ಎರಡು ದಿನಗಳ ನಂತರ ಭಾರತಕ್ಕೆ ಹಿಂತಿರುಗಿದ್ದ ವಿಂಗ್ ಕಮ್ಯಾಂಡರ್ ಅಭಿನಂದನ್ ವರ್ತಮಾನ್ ಅವರು ಶ್ರೀನಗರ್ ನಲ್ಲಿನ ತಮ್ಮ ಸ್ಕ್ವಾಡ್ರನ್ ನಲ್ಲೇ ಇದ್ದಾರೆ. ನಾಲ್ಕು ವಾರಗಳ ರಜಾ ಇದ್ದರೂ ಶ್ರೀನಗರ್ ದಲ್ಲಿನ ಸ್ಕ್ವಾಡ್ರನ್ ಗೆ ವಾಪಸಾದರು ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಜಾದಲ್ಲಿದ್ದರೂ ಚೆನ್ನೈನಲ್ಲಿರುವ ತಮ್ಮ ಕುಟುಂಬದ ಜತೆಗೆ ಇರಲು ತೆರಳದೆ ಶ್ರೀನಗರದಲ್ಲಿ ಸ್ಕ್ವಾಡ್ರನ್ ನಲ್ಲೇ ಇರುವುದಕ್ಕೆ ನಿಶ್ಚಯಿಸಿದರು. ಪಾಕಿಸ್ತಾನದಿಂದ ಭಾರತಕ್ಕೆ ಅಭಿನಂದನ್ ಹಿಂತಿರುಗಿದ ನಂತರ ಎರಡು ವಾರಗಳ ಕಾಲ ಅನುಸರಿಸಬೇಕಾದ ಎಲ್ಲ ನಿಯಮಗಳನ್ನು ಪೂರೈಸಿದ ಮೇಲೆ ಹನ್ನೆರಡು ದಿನ ರಜಾ ಮೇಲೆ ತೆರಳಿದರು.
ವರ್ತಮಾನ್ ಅವರು ಚೆನ್ನೈನಲ್ಲಿ ತಮ್ಮ ಪೋಷಕರ ಮನೆಗೆ ಕುಟುಂಬದ ಜತೆ ಸಮಯ ಕಳೆಯಲು ತೆರಳಬಹುದಿತ್ತು. ಆದರೆ ಅವರ ಸ್ಕ್ವಾಡ್ರನ್ ಇರುವ ಶ್ರೀನಗರಕ್ಕೆ ತೆರಳಲು ಬಯಸಿದರು ಎಂದು ಮೂಲಗಳು ತಿಳಿಸಿವೆ. ನಾಲ್ಕು ವಾರಗಳ ಅನಾರೋಗ್ಯದ ರಜಾ ನಂತರ ವೈದ್ಯಕೀಯ ಮಂಡಳಿ ಅವರ ಕ್ಷಮತೆಯನ್ನು ಪರಿಶೀಲಿಸಲಿದೆ. ಆ ನಂತರ ಅಭಿನಂದನ್ ಆಸೆಯಂತೆ ಮತ್ತೆ ಯುದ್ಧ ವಿಮಾನ ಚಲಾಯಿಸಬಹುದೇ ಎಂದು ನಿರ್ಧರಿಸಲಿದೆ.

ಫೆಬ್ರವರಿ ಇಪ್ಪತ್ತೇಳರಂದು ಪಾಕಿಸ್ತಾನ ಸೇನೆಯು ಅಭಿನಂದನ್ ರನ್ನು ಸೆರೆ ಹಿಡಿದಿತ್ತು. ಪಾಕಿಸ್ತಾನಿ ವಿಮಾನವನ್ನು ಅಭಿನಂದನ್ ಹೊಡೆದುರುಳಿಸಿದ ನಂತರ ಈ ಘಟನೆ ನಡೆದಿತ್ತು. ಮಾರ್ಚ್ ಒಂದರಂದು ಪಾಕಿಸ್ತಾನವು ಅಭಿನಂದನ್ ರನ್ನು ಬಿಡುಗಡೆ ಮಾಡಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications