ಜಮ್ಮು ಕಾಶ್ಮೀರಕ್ಕೆ ಮತ್ತೆ ವಿಶೇಷ ಸ್ಥಾನಮಾನ ನೀಡಿದರಷ್ಟೇ ಚುನಾವಣೆಯಲ್ಲಿ ಸ್ಪರ್ಧೆ:ಮೆಹಬೂಬಾ ಮುಫ್ತಿ
ನವದೆಹಲಿ, ಡಿಸೆಂಬರ್ 23: ಜಮ್ಮು ಕಾಶ್ಮೀರಕ್ಕೆ ಮತ್ತೆ ವಿಶೇಷ ಸ್ಥಾನಮಾನ ನೀಡುವವರೆಗೂ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಡಿಡಿಸಿ ಚುನಾವಣೆಯಲ್ಲಿ ಕಾಶ್ಮೀರದಲ್ಲಿ ಗುಪ್ಕರ್ ಮೈತ್ರಿಕೂಟವು 112 ಸ್ಥಾನಗಳನ್ನು ಪಡೆದಿದ್ದರೆ, ಜಮ್ಮುವಿನಲ್ಲಿ ಬಿಜೆಪಿಯು 74 ಮತಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಎನ್ಡಿಟಿವಿಗೆ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಮರಳಿ ನೀಡುವವರೆಗೂ ಯಾವುದೇ ಚುನಾವಣೆಯಲ್ಲಿ ಸ್ಪಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅದು ವಿಧಾನಸಭೆ ಚುನಾವಣೆಯೇ ಆಗಿರಲಿ, ನಾವು ಸ್ಪಧಿಸುವುದಿಲ್ಲ, ಅಂತಹ ಸಮಯ ಬಂದಾಗ ಸಭೆ ನಡೆಸುತ್ತೇವೆ, ಆದರೆ ಆ ಸ್ಪರ್ಧೆಯಲ್ಲಿ ನಾವಿಲ್ಲ ಎನ್ನುವುದನ್ನೂ ತಿಳಿಸುತ್ತೇವೆ.
ಕುತೂಹಲ ಮೂಡಿಸಿದ್ದ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾಭಿವೃದ್ಧಿ ಸಮಿತಿ ಚುನಾವಣೆಯಲ್ಲಿ (ಡಿಡಿಸಿ) ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ನೇತೃತ್ವದ ಗುಪ್ಕರ್ ಅಲೈಯನ್ಸ್ 280 ಸೀಟುಗಳ ಪೈಕಿ 112 ಸೀಟುಗಳಲ್ಲಿ ಗೆಲುವು ಮತ್ತು ಮುನ್ನಡೆ ಸಾಧಿಸುವ ಮೂಲಕ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ.
ಆದರೆ ಕಣಿವೆ ರಾಜ್ಯದಲ್ಲಿ ಕಮಲ ಮೇಲುಗೈ ಸಾಧಿಸಿದೆ. ಏಕಾಂಗಿಯಾಗಿ ಹೋರಾಡಿದ ಬಿಜೆಪಿ 74 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನು ಕಾಂಗ್ರೆಸ್ 26 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನದ ರದ್ದತಿ ಬಳಿಕ ಇದೇ ಮೊದಲ ಬಾರಿ ಡಿಡಿಸಿ ಚುನಾವಣೆ ನಡೆದಿದ್ದು, 370ನೇ ವಿಧಿಯನ್ನು ಮರಳಿ ಸ್ಥಾಪಿಸುವ ಶಪಥದೊಂದಿಗೆ ಫಾರೂಕ್ ಅಬ್ದುಲ್ಲಾ ನೇತೃತ್ವದಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮತ್ತು ಇತರೆ ಸ್ಥಳೀಯ ಪಕ್ಷಗಳು ಕೈಜೋಡಿಸಿ ಗುಪ್ಕರ್ ಅಲೈಯನ್ಸ್ (ಪಿಎಜಿಡಿ) ಒಕ್ಕೂಟ ರಚಿಸಿ ಚುನಾವಣೆ ಎದುರಿಸಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications