'ಆ. 370, 35 ಎ ಪುನರ್ ಸ್ಥಾಪನೆಯಾಗುವವರೆಗೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ': ಮೆಹಬೂಬಾ ಮುಫ್ತಿ
ನವದೆಹಲಿ, ಜೂ.26: ''ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35 ಎ ಪುನಃ ಸ್ಥಾಪನೆಯಾಗುವವರೆಗೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಲಾರೆ,'' ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಈ ಬಗ್ಗೆ ಇಂಡಿಯಾ ಟುಡೇ ಯ ರಾಜದೀಪ್ ಸರ್ದೇಸಾಯಿ ಜೊತೆಗಿನ ವಿಶೇಶೇಷ ಸಂದರ್ಶನದಲ್ಲಿ ಮಾತನಾಡಿದ ಪಿಡಿಪಿ ಮುಖಂಡೆ, ''ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು 35 ಎ ಪುನಃಸ್ಥಾಪನೆಯಾಗುವವರೆಗೂ 'ಅಧಿಕಾರ ರಾಜಕೀಯ'ದಲ್ಲಿ ಭಾಗವಹಿಸುವುದಿಲ್ಲ ಅಥವಾ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ,'' ಎಂದಿದ್ದಾರೆ.
"ಆರ್ಟಿಕಲ್ 370 ಮತ್ತು 35 ಎ ಪುನಃಸ್ಥಾಪನೆಯು ಕೇಂದ್ರವು ಒಂದು ತಟ್ಟೆಯಲ್ಲಿ ನೀಡುವಂತದ್ದು ಅಲ್ಲ ಎಂದು ನನಗೆ ತಿಳಿದಿದೆ. ಆದರೆ ಅದಕ್ಕಾಗಿ ನಾವು ಹೋರಾಡಬೇಕಿದೆ. ಆರ್ಟಿಕಲ್ 370, 35 ಎ ಪುನರ್ ಸ್ಥಾಪನೆಯಾಗುವವರೆಗೂ ಗುಪ್ಕರ್ ಮೈತ್ರಿ ಒಟ್ಟಾಗಿ ಉಳಿಯುತ್ತದೆ," ಎಂದು ತಿಳಿಸಿದ್ದಾರೆ.

"ನಮಗೆ ಭಾರತೀಯ ಸಂವಿಧಾನವು ಏನು ನೀಡಿದೆ ಅದು ನಮಗೆ ಧಕ್ಕಬೇಕು ಎಂದು ನಾವು ಬಯಸುತ್ತೇವೆ. ಅವರು (ಕೇಂದ್ರ ಬಿಜೆಪಿ ಸರ್ಕಾರ) ತಮ್ಮದೇ ಆದ ಚುನಾವಣಾ ಲಾಭಕ್ಕಾಗಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಭಾರತೀಯ ಸಂವಿಧಾನಕ್ಕೆ ಅಪಮಾನ ಮಾಡಿದೆ," ಎಂದು ದೂರಿದ್ದಾರೆ.
ಹಾಗೆಯೇ ನಮ್ಮದು 'ಪ್ರತ್ಯೇಕತಾವಾದಿ' ಬೇಡಿಕೆಯಲ್ಲ ಎಂದು ಕೂಡಾ ಮುಫ್ತಿ ಒತ್ತಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ಮತ್ತು 35 ಎ ವಿಧಿಗಳನ್ನು 2019 ರಲ್ಲಿ ರದ್ದು ಮಾಡಲಾಗಿದೆ. ಈ ಬೆನ್ನಲ್ಲೇ ಹಲವಾರು ನಾಯಕರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿ ಇರಿಸಿತ್ತು. ಅಷ್ಟೇ ಅಲ್ಲದೇ ಜಮ್ಮು ಕಾಶ್ಮೀರದಾದ್ಯಂತ ಅಂತರ್ಜಾಲ ಸ್ಥಗಿತಗೊಳಿಸಿತ್ತು.
ಸುಮಾರು ಎರಡು ವರ್ಷಗಳ ಬಳಿಕ ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಚಾರ ಕುರಿತು ಪ್ರಧಾನಿ ಮೋದಿ ಗುರುವಾರ ಸರ್ವಪಕ್ಷ ಸಭೆ ಕರೆದಿದ್ದರು.
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications