100 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಗಡಿಗಳು ಬಂದ್!
ಸಿಡ್ನಿ, ಜುಲೈ 06: ಆಸ್ಟ್ರೇಲಿಯಾ ಎರಡು ಜನಪ್ರಿಯ ರಾಜ್ಯಗಳ ನಡುವೆ ಗಡಿ ಬಂದ್ ಆಗಿದೆ. ಸರಿ ಸುಮಾರು 100 ವರ್ಷಗಳ ಬಳಿಕ ಈ ರೀತಿ ಪರಿಸ್ಥಿತಿ ಎದುರಾಗಿದ್ದು, ಕೊರೊನಾವೈರಸ್ ದೆಸೆಯಿಂದ ಅನಿರ್ಧಿಷ್ಟಾವಧಿ ಗಡಿಗಳನ್ನು ಲಾಕ್ಡೌನ್ ಮಾಡಲಾಗುತ್ತಿದೆ.
Recommended Video
ಆಸ್ಟ್ರೇಲಿಯಾದ ಪ್ರಮುಖ ರಾಜ್ಯಗಳಾದ ವಿಕ್ಟೋರಿಯಾ ಹಾಗೂ ನ್ಯೂ ಸೌಥ್ ವೇಲ್ಸ್ ನಡುವಿನ ಸಂಪರ್ಕ ಕಡಿತಗೊಳ್ಳಲಿದೆ. ಎರಡು ರಾಜ್ಯಗಳ ನಡುವಿನ ಗಡಿಯನ್ನು 100 ವರ್ಷಗಳ ಬಳಿಕ ಬಂದ್ ಮಾಡಲಾಗುತ್ತಿದೆ. 1919ರಲ್ಲಿ ಸ್ಪಾನೀಷ್ ಫ್ಲೂ ಸಾಂಕ್ರಾಮಿಕ ರೋಗದ ಪಿಡುಗು ಎದುರಾದಾಗ ಮಾತ್ರ ಎರಡು ರಾಜ್ಯಗಳ ನಡುವೆ ಗಡಿ ಬಂದ್ ಮಾಡಲಾಗಿತ್ತು.
ಕಳೆದ ಮೂರು ದಶಕಗಳಲ್ಲೇ ಅತ್ಯಂತ ಕಳಪೆ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿರುವ ಆಸ್ಟ್ರೇಲಿಯಾಕ್ಕೆ ಈ ರಾಜ್ಯಗಳ ನಡುವಿನ ಗಡಿ ಬಂದ್ ಭಾರಿ ಹೊಡೆತ ನೀಡಬಹುದು ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಆದರೆ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ವಿಕ್ಟೋರಿಯಾದ ಪ್ರತಿನಿಧಿ ಡೇನಿಯಲ್ ಆಂಡ್ರ್ಯೂಸ್, ಇದು ಈ ಸಮಯಕ್ಕೆ ಅತ್ಯವಶ್ಯ, ವೈರಸ್ ಸೋಂಕು ತಡೆಗಟ್ಟಲು ಅಗತ್ಯ ಕ್ರಮವೆನಿಸಿದೆ ಎಂದಿದ್ದಾರೆ.

ವಿಕ್ಟೋರಿಯಾ, ಮೆಲ್ಬೋರ್ನ್ ನಲ್ಲಿ 127 ಹೊಸ ಕೊವಿಡ್ 19 ಒಂದೇ ದಿನದಂದು ಕಾಣಿಸಿಕೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಒಟ್ಟಾರೆ, ದೇಶದಲ್ಲಿ 106 ಮಂದಿ ಮೃತರಾಗಿದ್ದಾರೆ. ಎರಡು ರಾಜ್ಯಗಳ ನಡುವಿನ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಂಪರ್ಕದ ಬಗ್ಗೆ ಮಾರ್ಗಸೂಚಿ ಇನ್ನೂ ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಮಿಲಿಟರಿ ಪಡೆಯಿಂದ ಗಡಿಯಲ್ಲಿ ಗಸ್ತು ನಿಯೋಜನೆಯಾಗಲಿದೆ.
ಆಸ್ಟ್ರೇಲಿಯಾದಲ್ಲಿ ಒಟ್ಟಾರೆ 8586 ಪಾಸಿಟಿವ್ ಪ್ರಕರಣಗಳಿದ್ದು, ನಿನ್ನೆ ಒಂದೇ ದಿನ 137 ಕೇಸುಗಳು ದಾಖಲಾಗಿವೆ. 7420 ಮಂದಿ ಗುಣಮುಖರಾಗಿದ್ದಾರೆ. 1060 ಸಕ್ರಿಯ ಪ್ರಕರಣಗಳಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications