ಆಸ್ಟ್ರೇಲಿಯಾದಲ್ಲಿ ಸುದ್ದಿಗಳಿಗೆ ಫೇಸ್ಬುಕ್ ಬ್ರೇಕ್; ಪ್ರಧಾನಿ ಸ್ಕಾಟ್ ಮಾರಿಸನ್ ಆಕ್ರೋಶ
ಸಿಡ್ನಿ, ಫೆಬ್ರವರಿ 19: ಆಸ್ಟ್ರೇಲಿಯಾದಲ್ಲಿ ಸುದ್ದಿ ವೀಕ್ಷಣೆ ಹಾಗೂ ಹಂಚಿಕೆ ಮೇಲೆ ಫೇಸ್ಬುಕ್ ನಿರ್ಬಂಧ ಹೇರಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಆಸ್ಟ್ರೇಲಿಯಾ ಸರ್ಕಾರ ಹಾಗೂ ಸಾಮಾಜಿಕ ಜಾಲತಾಣ ಫೇಸ್ ಬುಕ್ ಸಂಸ್ಥೆಯಿಂದ ಉನ್ನತ ಮಟ್ಟದ ಸಭೆ ನಡೆದಿದೆ.
ಗುರುವಾರ ಆಸ್ಟ್ರೇಲಿಯಾದಲ್ಲಿ ಸುದ್ದಿಗಳ ವೀಕ್ಷಣೆ ಹಾಗೂ ಹಂಚಿಕೆ ಮೇಲೆ ಫೇಸ್ಬುಕ್ ನಿರ್ಬಂಧ ವಿಧಿಸಿತ್ತು. ಆಸ್ಟ್ರೇಲಿಯಾದಲ್ಲಿ ಜಾರಿಗೆ ಬರುತ್ತಿರುವ ಉದ್ದೇಶಿತ ಕಾನೂನಿನ ಪ್ರಕಾರ, ಸುದ್ದಿ ಹಾಗೂ ಸುದ್ದಿ ಲೇಖನಗಳನ್ನು ಬಳಸಿಕೊಳ್ಳಲು ಡಿಜಿಟಲ್ ಸಂಸ್ಥೆಗಳು ಮಾಧ್ಯಮ ಸಂಸ್ಥೆಗಳಿಗೆ ಹಣ ಪಾವತಿ ಮಾಡಬೇಕಾಗುತ್ತದೆ. ಹೀಗಾಗಿ ಈ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಫೇಸ್ ಬುಕ್ ತಿಳಿಸಿತ್ತು.
ಈ ಸಂಬಂಧ ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಜೊತೆ ಚರ್ಚೆ ಮಾಡಿದ್ದು, ಒಪ್ಪಂದದ ಮಾತುಕತೆ ಮುಂದುವರೆಯುತ್ತದೆ ಎಂದು ಫೇಸ್ಬುಕ್ ಸಂಸ್ಥೆಯ ಜೋಶ್ ಫ್ರೈಡೆನ್ಬರ್ಗ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಸುದ್ದಿಗಳ ವೀಕ್ಷಣೆ ಹಾಗೂ ಹಂಚಿಕೆ ಮೇಲಿನ ನಿರ್ಬಂಧ ಹಿಂಪಡೆಯಬೇಕು ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಆಗ್ರಹಿಸಿದ್ದಾರೆ. "ಫೇಸ್ಬುಕ್ ವಿವಾದದ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ. ಆಸ್ಟ್ರೇಲಿಯಾದ ಈ ಉದ್ದೇಶಿತ ಕಾನೂನಿನ ಬಗ್ಗೆ ಬ್ರಿಟನ್, ಕೆನಡಾ ಹಾಗೂ ಫ್ರಾನ್ಸ್ ನಾಯಕರೊಂದಿಗೆ ಚರ್ಚಿಸುತ್ತೇನೆ" ಎಂದು ತಿಳಿಸಿದ್ದಾರೆ.
"ಆಸ್ಟ್ರೇಲಿಯಾ ಏನು ಮಾಡುತ್ತದೆ ಎಂದು ಇಡೀ ಪ್ರಪಂಚ ಇತ್ತ ನೋಡುತ್ತಿದೆ. ಅದಕ್ಕಾಗಿ ಗೂಗಲ್, ಫೇಸ್ಬುಕ್ ಸಂಸ್ಥೆಗಳನ್ನು ಚರ್ಚೆಗೆ ಆಹ್ವಾನಿಸಿದ್ದೇವೆ. ಪಾಶ್ಚಿಮಾತ್ಯ ದೇಶಗಳು ಇದನ್ನು ಅನುಸರಿಸುವ ಸಾಧ್ಯತೆ ಇದೆ" ಎಂದಿದ್ದಾರೆ. ಈ ಕಾಯ್ದೆ ಜನಪ್ರತಿನಿಧಿಗಳ ಸಭೆಯಲ್ಲಿ ಅಂಗೀಕೃತಗೊಂಡಿದ್ದು, ಸೆನೆಟ್ ಅನುಮೋದನೆ ಬಳಿಕ ಕಾನೂನಾಗಿ ಜಾರಿಯಾಗಲಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications