ಕೊರೊನಾ ಹೆಚ್ಚಳ: ಪ್ರಜೆಗಳ ಬಳಿ ಕ್ಷಮೆ ಯಾಚಿಸಿದ ಆಸ್ಟ್ರೇಲಿಯಾ ಪ್ರಧಾನಿ
ಸಿಡ್ನಿ, ಜುಲೈ 22: ಒಂದೆಡೆ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇನ್ನೊಂದೆಡೆ ಲಸಿಕೆ ವಿತರಣೆ ಪ್ರಮಾಣ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಆದರೆ ಕೊರೊನಾ ಲಸಿಕೆ ವಿತರಣೆ ಪ್ರಮಾಣ ಹೆಚ್ಚು ಮಾಡಲು ಸಾಧ್ಯವಾಗದಿರುವುದಕ್ಕೆ ಕ್ಷಮೆ ಕೇಳಿದ್ದಾರೆ.
ಲಸಿಕಾ ದರ ಶೇ.11ರಷ್ಟಿದೆ ಇದು ಬೇರೆ ದೇಶಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣದ್ದಾಗಿದೆ. ಈ ವರ್ಷದ ಆರಂಭದಲ್ಲಿ ಕೊರೊನಾ ಲಸಿಕೆ ವಿತರಣೆ ಕುರಿತು ಹೊಂದಿದ್ದ ಗುರಿಯನ್ನು ತಲುಪಲು ನಮ್ಮ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಕ್ಷಮಿಸಿ ಎಂದು ಕೇಳಿದ್ದಾರೆ.

ಲಸಿಕೆ ವಿತರಣೆಯ ಜವಾಬ್ದಾರಿಯನ್ನು ನಾನು ಹೊರುತ್ತೇನೆ, ಹಾಗೆಯೇ ನಾವು ಅನುಭವಿಸುತ್ತಿರುವ ಸವಾಲನ್ನು ಎದುರಿಸುವ ಜವಾಬ್ದಾರಿಯನ್ನು ಕೂಡ ನಾನೇ ಹೊರುತ್ತೇನೆ ಎಂದರು.
ಕೊರೊನಾ ಸೋಂಕು ಹೆಚ್ಚಾಗಿರುವ ಕಾರಣ ಸಿಡ್ನಿಯನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಈ ಕುರಿತು ಸ್ಕಾಟ್ ಮಾರಿಸನ್ ಮಾತನಾಡಿದ್ದಾರೆ. ಸಿಡ್ನಿ ಲಾಕ್ಡೌನ್ ಮಾಡಿ ಸುಮಾರು ಒಂದು ತಿಂಗಳು ಕಳೆಯುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಕೆಲವು ನಿಯಮಗಳನ್ನು ಸಡಿಲಗೊಳಿಸುವ ಕುರಿತು ಚರ್ಚೆ ನಡೆಸಿದ್ದಾರೆ.
ಎಲ್ಲರೂ ಕೊರೊನಾ ಲಸಿಕೆ ಪಡೆಯುವರೆಗೂ ಹಲವು ನಿರ್ಬಂಧಗಳನ್ನು ಮುಂದುವರೆಸಲಾಗುವುದು, ಆಸ್ಟ್ರೇಲಿಯಾದಲ್ಲಿ ಆಸ್ಟ್ರಾಜೆನೆಕಾ ಲಸಿಕೆಯನ್ನು ನೀಡಲಾಗುತ್ತಿದೆ.
ಸ್ಟ್ರೇಲಿಯಾದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್ನಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಆಸ್ಟ್ರೇಲಿಯಾದಲ್ಲಿ 31,400 ಸೋಂಕು ಪ್ರಕರಣಗಳು ದಾಖಲಾಗಿದ್ದು, 912 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
'ದಯವಿಟ್ಟು ಮನೆಯಿಂದ ಹೊರ ಬರಬೇಡಿ': ಸಿಡ್ನಿಯಲ್ಲಿ ಇದೆಂಥಾ ಪರಿಸ್ಥಿತಿ?'ದಯವಿಟ್ಟು ಮನೆಯಿಂದ ಹೊರ ಬರಬೇಡಿ': ಸಿಡ್ನಿಯಲ್ಲಿ ಇದೆಂಥಾ ಪರಿಸ್ಥಿತಿ?
ಹೀಗಾಗಿ ಈಗಾಗಲೇ ಸಿಡ್ನಿಯಲ್ಲಿ ಲಾಕ್ ಡೌನ್ ಹೇರಲಾಗಿದ್ದು, ಇದರ ಬೆನ್ನಲ್ಲೇ ಮೆಲ್ಬರ್ನ್ ನಗರದಲ್ಲೂ ಕೂಡ ಲಾಕ್ಡೌನ್ ಜಾರಿ ಮಾಡಲಾಗಿದೆ. ಮೆಲ್ಬರ್ನ್ ನಗರದ ಸುಮಾರು 1.2 ಕೋಟಿ ಜನರಿಗೆ ಮನೆ ಬಿಟ್ಟು ಹೊರಬರದಂತೆ ಆದೇಶ ಹೊರಡಿಸಲಾಗಿದೆ.
ಆಸ್ಟ್ರೇಲಿಯಾದಲ್ಲಿ ಗಣನೀಯ ಪ್ರಮಾಣದಲ್ಲಿ ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಪರಿಣಾಮ ಕ್ರಮೇಣ ಆಸ್ಟ್ರೇಲಿಯಾ ಲಾಕ್ ಡೌನ್ ಮುಷ್ಟಿಗೆ ಸಿಲುಕುತ್ತಿದೆ. ಕೋವಿಡ್-19ರ ಡೆಲ್ಟಾ ರೂಪಾಂತರ ತಳಿಯು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications